13 ರಾಜ್ಯಗಳಲ್ಲಿ ಹೆಚ್ಚಿದ ಪೌರತ್ವ ಕಿಚ್ಚು: ಗೋಲಿಬಾರ್'ಗೆ ಲಖನೌನಲ್ಲಿ 1 ಬಲಿ 
ದೇಶ

13 ರಾಜ್ಯಗಳಲ್ಲಿ ಹೆಚ್ಚಿದ ಪೌರತ್ವ ಕಿಚ್ಚು: ಗೋಲಿಬಾರ್'ಗೆ ಲಖನೌನಲ್ಲಿ 1 ಬಲಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಗುರುವಾರ ದೇಶದ 13 ಮಹಾನಗರಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ನಿಷೇಧಾಜ್ಞೆ ಇದ್ದರೂ ಉತ್ತರಪ್ರದೇಶ, ಬಿಹಾರ, ಗುಜರಾತ್, ಪಶ್ಚಿಮ ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಗುರುವಾರ ದೇಶದ 13 ಮಹಾನಗರಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ನಿಷೇಧಾಜ್ಞೆ ಇದ್ದರೂ ಉತ್ತರಪ್ರದೇಶ, ಬಿಹಾರ, ಗುಜರಾತ್, ಪಶ್ಚಿಮ ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 

ಉತ್ತರಪ್ರದೇಶದ ಲಖನೌನಲ್ಲಿ ಪ್ರತಿಭಟನಾಕಾರರು ಕಲ್ಲು ತೂರಿ 12 ಬೈಕ್ ಗಳು, ಕಾರು, ಮಾಧ್ಯಮದ ನೇರಪ್ರಸಾರ ವಾಹನಕ್ಕೆ ಬೆಂಕಿ ಹೆಚ್ಚಿದರು. 

ಈ ವೇಳೆ ಪೊಲೀಸರ ಗೋಲಿಬಾರ್'ಗೆ ಓರ್ವ ಬಲಿಯಾಗಿದ್ದಾನೆ. ಆದರೆ, ಈತ ಪ್ರತಿಭಟನಾಕಾರನಲ್ಲ. ಹಿಂಸೆ ವೇಳೆ ಈತ ಸಾಗುತ್ತಿದ್ದಾಗ ಅಚಾನಕ್ಕಾಗಿ ಗುಂಡು ತಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇನ್ನು ಸಂಭಲ್ ನಲ್ಲಿ ಸರ್ಕಾರಿ ಬಸ್ಸಿಗೆ ಬೆಂಕಿ ಹಚ್ಚಿ, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಲಾಗಿದೆ. 

ಬಿಹಾರದ ಪಾಟ್ನ ಹಾಗೂ ಜೆಹಾನಾಬಾದ್ ನಲ್ಲಿ ಬಸ್ಸು ಹಾಗೂ ಕಾರುಗಳನ್ನು ಧ್ವಂಸಗೊಳಿಸಲಾಗಿದೆ. ಅಹಮದಾಬಾದ್ ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಲಾಗಿದೆ. ಪಶ್ಚಿಮ ಬಂಗಾಳದ ದಿನಾಜ್ ಪುರದಲ್ಲಿ ಕಚ್ಚಾ ಬಾಂಬ್ ಎಸೆತ ನಡೆದಿರುವುದಾಗಿ ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT