13 ರಾಜ್ಯಗಳಲ್ಲಿ ಹೆಚ್ಚಿದ ಪೌರತ್ವ ಕಿಚ್ಚು: ಗೋಲಿಬಾರ್'ಗೆ ಲಖನೌನಲ್ಲಿ 1 ಬಲಿ 
ದೇಶ

13 ರಾಜ್ಯಗಳಲ್ಲಿ ಹೆಚ್ಚಿದ ಪೌರತ್ವ ಕಿಚ್ಚು: ಗೋಲಿಬಾರ್'ಗೆ ಲಖನೌನಲ್ಲಿ 1 ಬಲಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಗುರುವಾರ ದೇಶದ 13 ಮಹಾನಗರಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ನಿಷೇಧಾಜ್ಞೆ ಇದ್ದರೂ ಉತ್ತರಪ್ರದೇಶ, ಬಿಹಾರ, ಗುಜರಾತ್, ಪಶ್ಚಿಮ ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಗುರುವಾರ ದೇಶದ 13 ಮಹಾನಗರಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ನಿಷೇಧಾಜ್ಞೆ ಇದ್ದರೂ ಉತ್ತರಪ್ರದೇಶ, ಬಿಹಾರ, ಗುಜರಾತ್, ಪಶ್ಚಿಮ ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 

ಉತ್ತರಪ್ರದೇಶದ ಲಖನೌನಲ್ಲಿ ಪ್ರತಿಭಟನಾಕಾರರು ಕಲ್ಲು ತೂರಿ 12 ಬೈಕ್ ಗಳು, ಕಾರು, ಮಾಧ್ಯಮದ ನೇರಪ್ರಸಾರ ವಾಹನಕ್ಕೆ ಬೆಂಕಿ ಹೆಚ್ಚಿದರು. 

ಈ ವೇಳೆ ಪೊಲೀಸರ ಗೋಲಿಬಾರ್'ಗೆ ಓರ್ವ ಬಲಿಯಾಗಿದ್ದಾನೆ. ಆದರೆ, ಈತ ಪ್ರತಿಭಟನಾಕಾರನಲ್ಲ. ಹಿಂಸೆ ವೇಳೆ ಈತ ಸಾಗುತ್ತಿದ್ದಾಗ ಅಚಾನಕ್ಕಾಗಿ ಗುಂಡು ತಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇನ್ನು ಸಂಭಲ್ ನಲ್ಲಿ ಸರ್ಕಾರಿ ಬಸ್ಸಿಗೆ ಬೆಂಕಿ ಹಚ್ಚಿ, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಲಾಗಿದೆ. 

ಬಿಹಾರದ ಪಾಟ್ನ ಹಾಗೂ ಜೆಹಾನಾಬಾದ್ ನಲ್ಲಿ ಬಸ್ಸು ಹಾಗೂ ಕಾರುಗಳನ್ನು ಧ್ವಂಸಗೊಳಿಸಲಾಗಿದೆ. ಅಹಮದಾಬಾದ್ ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಲಾಗಿದೆ. ಪಶ್ಚಿಮ ಬಂಗಾಳದ ದಿನಾಜ್ ಪುರದಲ್ಲಿ ಕಚ್ಚಾ ಬಾಂಬ್ ಎಸೆತ ನಡೆದಿರುವುದಾಗಿ ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT