ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ರಾಷ್ಚ್ರಪತಿ ಕೋವಿಂದ್ ದಕ್ಷಿಣ ಭಾರತ ಭೇಟಿ: ತೀವ್ರ ಭದ್ರತೆ 

ದಕ್ಷಿಣ ಭಾರತ ಪ್ರವಾಸವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಹೈದರಾಬಾದ್ ಪೊಲೀಸರು ರಾಜ್ಯಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.

ಹೈದರಾಬಾದ್(ತೆಲಂಗಾಣ): ದಕ್ಷಿಣ ಭಾರತ ಪ್ರವಾಸವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಹೈದರಾಬಾದ್ ಪೊಲೀಸರು ರಾಜ್ಯಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಡಿಸೆಂಬರ್ 28ರವರೆಗೆ ದಕ್ಷಿಣ ಪ್ರವಾಸ ಕೈಗೊಳ್ಳಲಿದ್ದಾರೆ.


ಈ ಹಿನ್ನಲೆಯಲ್ಲಿ ನಗರ ಪೊಲೀಸರು ಅಲ್ವಾಲ್, ಬೊಲರಮ್, ಹಕಿಂಪೆಟೆ ಪ್ರದೇಶಗಳಲ್ಲಿ ಸಕಲ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಹೈದರಾಬಾದ್ ಪೊಲೀಸರಿಗೆ ಈ ಸಂಬಂಧ ಅನೇಕ ಸಲಹೆಗಳನ್ನು ನೀಡಲಾಗಿದೆ.


ಹೈದರಾಬಾದ್ ನಲ್ಲಿ ರಾಷ್ಟ್ರಪತಿಗಳು ಇದೇ 22ರಂದು ಇರಲಿದ್ದು ಅಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಮೊಬೈಲ್ ಆಪ್ ನ್ನು ಬಿಡುಗಡೆಗೊಳಿಸಲಿದ್ದಾರೆ. ಡಿಸೆಂಬರ್ 23ರಂದು ಪುದುಚೆರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಕನ್ಯಾಕುಮಾರಿಯಲ್ಲಿ ವಿವೇಕಾನಂದ ಸ್ಮಾರಕ ಮತ್ತು ವಿವೇಕಾನಂದ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. 


ಡಿಸೆಂಬರ್ 27ಕ್ಕೆ ರಾಷ್ಟ್ರಪತಿಗಳು ಹಿರಿಯ ಗಣ್ಯರು, ಸಚಿವರು, ಅಧಿಕಾರಿಗಳು, ಪ್ರಮುಖ ನಾಗರಿಕರು, ಶಿಕ್ಷಣತಜ್ಞರು ಮೊದಲಾದವರಿಗೆ ಸಿಕಂದರಾಬಾದ್ ನ ರಾಷ್ಟ್ರಪತಿ ನಿಲಯದಲ್ಲಿ ಅತಿಥಿ ಸತ್ಕಾರ ಏರ್ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT