ದೇಶ

ಭಾರತ ಪೌರತ್ವ ಪಡೆಯಲು ಆಧಾರ್, ವೋಟರ್ ಐಡಿ, ಪಾಸ್ ಪೋರ್ಟ್ ದಾಖಲೆಗಳಲ್ಲ: ಕೇಂದ್ರ ಸರ್ಕಾರ 

ಭಾರತದ ಪೌರತ್ವಕ್ಕೆ ಆಧಾರ್, ಚುನಾವಣಾ ಗುರುತು ಪತ್ರ ಮತ್ತು ಪಾಸ್ ಪೋರ್ಟ್ ದಾಖಲೆಗಳಲ್ಲ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಭಾರತದ ಪೌರತ್ವಕ್ಕೆ ಆಧಾರ್, ಚುನಾವಣಾ ಗುರುತು ಪತ್ರ ಮತ್ತು ಪಾಸ್ ಪೋರ್ಟ್ ದಾಖಲೆಗಳಲ್ಲ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


ರಾಷ್ಟ್ರೀಯ ಪೌರತ್ವ ದಾಖಲಾತಿಗೆ ಅಗತ್ಯವಿರುವ ದಾಖಲೆಗಳನ್ನು ಅಧಿಕಾರಿಗಳು ಕೇಳುತ್ತಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬುತ್ತಿರುವ ವದಂತಿಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ.


ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಬಗ್ಗೆ ಎದ್ದಿರುವ ಪ್ರತಿಭಟನೆ ಮತ್ತು ಹಿಂಸಾಚಾರ ಸಂಬಂಧ 13 ಪ್ರಶ್ನೆಗಳನ್ನು ಅದಕ್ಕೆ ಉತ್ತರಗಳನ್ನು ಸಿದ್ದಪಡಿಸಿರುವ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಇರುವ ವಾಸ್ತವಾಂಶಗಳನ್ನು ಜನರ ಮುಂದಿಡುವ ಪ್ರಯತ್ನ ಮಾಡಿದೆ.


ಎನ್ ಆರ್ ಸಿ ಬಗ್ಗೆ ಈಗ ಮಾತನಾಡುವುದು ಬಹಳ ಬೇಗನೆ ಆಗುತ್ತದೆ ಆದರೆ ಚುನಾವಣಾ ಗುರುತುಪತ್ರ, ಆಧಾರ್ ಕಾರ್ಡು ಮತ್ತು ಪಾಸ್ ಪೋರ್ಟ್ ಪೌರತ್ವ ಪಡೆಯಲು ಸಲ್ಲಿಸಬೇಕಾದ ದಾಖಲೆಗಳಾಗುವುದಿಲ್ಲ. ಇವುಗಳು ಪ್ರಯಾಣ ಮಾಡುವಾಗ ಸಲ್ಲಿಸುವ ದಾಖಲೆಗಳು ಮತ್ತು ಭಾರತದಲ್ಲಿ ವಾಸವಿದ್ದೇವೆ ಎಂದು ಖಚಿತಪಡಿಸಲು ತೋರಿಸುವ ದಾಖಲೆಗಳು ಮಾತ್ರ ಆಗಿರುತ್ತವೆ ಎಂದು ಅಧಿಕಾರಿಗಳು ಹೇಳುತ್ತಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವಾಲಯ ವಕ್ತಾರರು, ವ್ಯಕ್ತಿಯ ಜನ್ಮ ಪ್ರಮಾಣ ಪತ್ರ, ಜನನ ಸ್ಥಳ ಪ್ರಮಾಣಪತ್ರ ಅಥವಾ ಇವೆರಡನ್ನೂ ಸಲ್ಲಿಸಿ ಭಾರತದ ಪೌರತ್ವಕ್ಕೆ ಸಂಬಂಧಿಸಿದಂತೆ ದಾಖಲೆಯಾಗುತ್ತದೆ. ಪೌರತ್ವ ಕಾಯ್ದೆ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡುವುದಾಗಲಿ, ಅನನುಕೂಲತೆ ಮಾಡುವುದಾಗಲಿ ಮಾಡುವುದಿಲ್ಲ. 


ಅನಕ್ಷರಸ್ಥ ನಾಗರಿಕರಿಗೆ ಸಮುದಾಯದ ಸದಸ್ಯರು ನೀಡುವ ಸಾಕ್ಷಿಗಳು, ಸ್ಥಳೀಯ ಸಾಕ್ಷಿಗಳು ದಾಖಲೆಗಳಾಗುತ್ತವೆ. 
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಗೃಹ ಸಚಿವಾಲಯ ಕಾನೂನು ಸಚಿವಾಲಯ ಜೊತೆ ಸಮಾಲೋಚಿಸಿ ಕಾನೂನನ್ನು ತಯಾರಿಸುತ್ತಿದೆ. 


ಯಾರಿಗೂ ಸುಖಾಸುಮ್ಮನೆ ಭಾರತದ ಪೌರತ್ವ ಸಿಗುವುದಿಲ್ಲ. ಅವರ ಅರ್ಹತೆಯನ್ನು ಸಾಬೀತುಪಡಿಸಬೇಕು. ಇಲ್ಲಿರುವ ಜನರನ್ನು ಹೊರಗೆ ಕಳುಹಿಸುವುದಿಲ್ಲ. ಜನರು ಅತಿಯಾಗಿ ಆತಂಕಗೊಂಡಿದ್ದಾರೆ. ಕಾನೂನಿನಲ್ಲಿ ಜನರಿಗೆ ಸುರಕ್ಷತೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ. 


ಸಿಎಎ ಕಾಯ್ದೆಯ 14ಎ ಸೆಕ್ಷನ್ ನಡಿ ಜನರಿಗೆ ದೇಶದ ಗುರುತು ಪತ್ರ ನೀಡಲಾಗುತ್ತದೆ. 


ಸಿಎಎಯನ್ನು ಜಾರಿಗೆ ತರುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಪಟ್ಟುಹಿಡಿದಿದ್ದರೂ ಸಿಎಎ, ಎನ್ ಪಿಆರ್ ಮತ್ತು ಎನ್ ಆರ್ ಸಿಗಳನ್ನು ಜಾರಿಗೆ ತರದಿರಲು ಸಾಧ್ಯವೇ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT