ಸಾಂದರ್ಭಿಕ ಚಿತ್ರ 
ದೇಶ

ಪೌರತ್ವ ಪ್ರತಿಭಟನೆ: ನಾಳೆ ಲಖನೌಗೆ ಟಿಎಂಸಿ ನಿಯೋಗ ಭೇಟಿ, ಮೃತರ ಕುಟುಂಬಕ್ಕೆ ಸಾಂತ್ವನ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಉತ್ತರ ಪ್ರದೇಶದಲ್ಲಿ ಪೊಲೀಸರ ಗುಂಡಿಗೆ  8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಯೋಗ ನಾಳೆ ಲಖನೌಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದೆ.

ಟಿಎಂಸಿ ನಾಯಕ ದಿನೇಶ್ ತ್ರಿವೇದಿ ನೇತೃತ್ವದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಬೆಳಗ್ಗೆ ಲಖನೌಗೆ ತೆರಳಲಿದ್ದು, ಪೊಲೀಸ್ ಗುಂಡಿಗೆ ಬಲಿಯಾದವರ ಕುಟಂಬವನ್ನು ಭೇಟಿ ಮಾಡಲಿದೆ.

"ಮಾನವೀಯ ಉದ್ದೇಶದಿಂದ ನಮ್ಮ ನಿಯೋಗವು ಉತ್ತರ ಪ್ರದೇಶಕ್ಕೆ(ಲಖನೌ) ಭೇಟಿ ನೀಡುತ್ತಿದ್ದು, ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗ ಹಾಗೂ ಗಾಯಗೊಂಡವರನ್ನು ಭೇಟಿ ಮಾಡಲಿದೆ" ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT