ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ನಾಗರಿಕರು ಬ್ಯಾಂಕ್ ಖಾತೆ ತೆರೆಯಲು ಧರ್ಮ ಘೋಷಿಸುವ ಅಗತ್ಯವಿಲ್ಲ- ಹಣಕಾಸು ಸಚಿವಾಲಯ

ಭಾರತೀಯ ನಾಗರಿಕರು ಬ್ಯಾಂಕಿನ ಕೆವೈಸಿ- ಗ್ರಾಹಕರ ಗುರುತು ಹಾಗೂ ಪುರಾವೆಗಳನ್ನು ಖಾತರಿಪಡಿಸಿಕೊಳ್ಳುವಿಕೆಯ  (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಫಾರಂನಲ್ಲಿ ಧರ್ಮವನ್ನು ಘೋಷಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ನವದೆಹಲಿ: ಭಾರತೀಯ ನಾಗರಿಕರು ಬ್ಯಾಂಕಿನ ಕೆವೈಸಿ- ಗ್ರಾಹಕರ ಗುರುತು ಹಾಗೂ ಪುರಾವೆಗಳನ್ನು ಖಾತರಿಪಡಿಸಿಕೊಳ್ಳುವಿಕೆಯ  (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಫಾರಂನಲ್ಲಿ ಧರ್ಮವನ್ನು ಘೋಷಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಕೆವೈಸಿ ಅಥವಾ ಬ್ಯಾಂಕ್ ಖಾತೆ ತೆರೆಯಲು, ಅಸ್ತಿತ್ವದಲ್ಲಿರುವ ಬ್ಯಾಂಕ್ ಖಾತೆಗೆ ಭಾರತೀಯ ನಾಗರಿಕರು ಧರ್ಮ ಘೋಷಿಸುವ ಅಗತ್ಯವಿಲ್ಲ ಎಂದು ಹಣಕಾಸು ಸಚಿವಾಲಯದ  ಹಣಕಾಸು ಸೇವೆ ಇಲಾಖೆ ಕಾರ್ಯದರ್ಶಿ ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.

"ಬ್ಯಾಂಕುಗಳ  ಬಗ್ಗೆಗಿನ ಅಂತಹ ಆಧಾರರಹಿತ ವದಂತಿಗಳಿಗೆ ಒಳಗಾಗಬೇಡಿ ಎಂದು ಅವರು ಹೇಳಿದ್ದಾರೆ. 

ಅನಿವಾಸಿ ಭಾರತೀಯ ಸಾಮಾನ್ಯ ರೂಪಾಯಿ ಖಾತೆಗಳು ( ಎನ್. ಆರ್. ಓ) ಖಾತೆ ತೆರೆಯುವಾಗ  ಫೆಮಾ ಕಾಯ್ದೆಯ ನಿಯಮಗಳಲ್ಲಿನ ಬದಲಾವಣೆಗನುಗುಣವಾಗಿ  ಗ್ರಾಹಕರು ಮತ್ತು ಠೇವಣಿದಾರರು ಕೆವೈಸಿ ಫಾರಂನಲ್ಲಿ ಧರ್ಮದ ವಿವರಗಳನ್ನು ಬ್ಯಾಂಕ್ ಗಳ ಶೀಘ್ರದಲ್ಲಿಯೇ ಪಡೆಯಬಹುದು ಎಂಬ ಮಾಧ್ಯಮಗಳ ವರದಿ ಬೆನ್ನಲ್ಲೇ ಈ ಸ್ಪಷ್ಟೀಕರಣ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

"GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ": TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ: ವಿವರ ಇಂತಿದೆ..

SCROLL FOR NEXT