ಪಂಜಿನ ಮೆರವಣಿಗೆ 
ದೇಶ

ಕೇರಳ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ, ಎಡಪಕ್ಷಗಳ ಯುವ ಒಕ್ಕೂಟದಿಂದ ಪಂಜಿನ ಮೆರವಣಿಗೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಕೇರಳದಲ್ಲಿ   ರಾತ್ರಿ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಕೇರಳದಲ್ಲಿ   ರಾತ್ರಿ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ತಿರುವನಂತಪುರಂನಲ್ಲಿ ಎಡಪಕ್ಷಗಳ ಯುವ  ಒಕ್ಕೂಟದಿಂದ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಮಹಿಳೆಯರು ಮಕ್ಕಳು ಕೂಡಾ ಪಂಜನು ಹಿಡಿದು ಮೆರವಣಿಗೆಯಲ್ಲಿ ಸಾಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜಸ್ತಾನದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುರಕ್ಷತೆ ಹಾಗೂ ಭದ್ರತೆ ಕಾರಣದಿಂದ ನಾಳೆ  ಬೆಳಗ್ಗೆ 8 ಗಂಟೆಯಿಂದ 2 ಗಂಟೆಯವರೆಗೂ ಜೈಪುರ ಮೆಟ್ರೋ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜೈಪುರ ಮೆಟ್ರೋ ರೈಲು ಕಾರ್ಪೋರೇಷನ್ ತಿಳಿಸಿದೆ. 

ಆರ್ ಜೆಡಿ ನೇತೃತ್ವದಲ್ಲಿ ನಡೆದ ಬಿಹಾರ ಬಂದ್  ಹಿನ್ನೆಲೆಯಲ್ಲಿ  14 ಪ್ರಕರಣಗಳಲ್ಲಿ 13  ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಎಡಿಜಿ ಜೀತೇಂದ್ರ ಕುಮಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT