ದೇಶ

ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ 

Srinivas Rao BV

ಢಾಕಾ: ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ. 

ಈ ಕಾಯ್ದೆ ಹಾಗೂ ಎನ್ ಆರ್ ಸಿಯಿಂದ ದೇಶದಲ್ಲಿ ಉಂಟಾಗುವ ಅಸ್ಥಿರತೆ ನೆರೆ ರಾಷ್ಟ್ರಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದು, ಯಾವುದೆ ಪರಿಸ್ಥಿತಿಯಲ್ಲಿಯೂ ಸಹ ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ಭರವಸೆ ನೀಡಿದ್ದಾರೆಂದು ಮೊಮೆನ್ ಹೇಳಿದ್ದು, ಭಾರತವನ್ನು ನಂಬುವುದಾಗಿ ತಿಳಿಸಿದ್ದಾರೆ. 

ನಾವು ಭಾರತದ ನಂ.1 ಮಿತ್ರ ರಾಷ್ಟ್ರ. ಅಲ್ಲೇನಾದರೂ ಅಸ್ಥಿರತೆ, ಅನಿಶ್ಚಿತತೆ ಉಂಟಾದರೆ ಅದು ನಮ್ಮ ಮೇಲೆಯೂ ಪರಿಣಾಮ ಬೀರಲಿದೆ. ಇದಷ್ಟೇ ನಮ್ಮ ಭಯ ಎಂದು ಅಲ್ಲಿನ  ವಿದೇಶಾಂಗ ಸಚಿವರು ಹೇಳಿದ್ದಾರೆ. 

SCROLL FOR NEXT