ಸಿಎಎ ಪ್ರತಿಭಟನೆ 
ದೇಶ

ನಾವಲ್ಲ, ಅಮಿತ್ ಶಾ ಭಯ, ಅನಿಶ್ಚಿತತೆ' ವಾತಾವರಣ ಸೃಷ್ಟಿಸಿದ್ದಾರೆ- ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ  ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ನವದೆಹಲಿ: ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ  ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೊಳಿಸುವುದಾಗಿ ಗೃಹ ಸಚಿವರು ಸಂಸತ್ತಿನ ಉಭಯ ಸದನಗಳಲ್ಲಿ ನೀಡಿರುವ ಹೇಳಿಕೆ  ಅನಿಶ್ಚಿತತೆ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುವ ಗುಣ ಹೊಂದಿರಬೇಕು. ಪ್ರಧಾನಿ ಒಂದು ವೇಳೆ ಸೂಕ್ಷ್ಮ ಹಾಗೂ ಗಂಭೀರ ಮನಸ್ಥಿತಿವುಳ್ಳವರಾಗಿದ್ದರೆ  ರಾಷ್ಟ್ರೀಯ ಏಕೀಕರಣ ಸಮಿತಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಈ ವಿಚಾರದ ಬಗ್ಗೆ ಚರ್ಚಿಸಬೇಕು ಆನಂದ್ ಶರ್ಮಾ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

SCROLL FOR NEXT