ಸಂಗ್ರಹ ಚಿತ್ರ 
ದೇಶ

Alert: ಮತ್ತೊಂದು ಬ್ಯಾಂಕ್ ಮುಷ್ಕರಕ್ಕೆ ಸಿದ್ದರಾಗಿ!

ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಒಕ್ಕೂಟಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿವೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಒಕ್ಕೂಟಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿವೆ.

ಹೊಸ ವರ್ಷಾರಂಭದಲ್ಲೇ ಬ್ಯಾಂಕ್ ಗ್ರಾಹಕರಿಗೆ ಮುಷ್ಕರದ ಬಿಸಿ ಮುಟ್ಟಲಿದ್ದು, 2020 ರ ಜನವರಿ 8 ರಂದು ಕೇಂದ್ರ ಕಾರ್ಮಿಕ ಸಂಘಗಳು ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿದೆ. ಈ ಕುರಿತಂತೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆ, ಉದ್ಯೋಗ ಸೃಷ್ಟಿ, ಕಾರ್ಮಿಕರ ಮೇಲೆ ಪ್ರತಿಕೂಲ ತಿದ್ದುಪಡಿ ಕಾನೂನುಗಳು ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು 10 ಕೇಂದ್ರ ಕಾರ್ಮಿಕ ಸಂಘಗಳು ಜನವರಿ 8 ರಂದು ರಾಷ್ಟ್ರೀಯ ಸಾಮಾನ್ಯ ಮುಷ್ಕರಕ್ಕೆ ಕರೆ ನೀಡಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಬ್ಯಾಂಕಿಂಗ್ ವಲಯದ ಐದು ಒಕ್ಕೂಟಗಳು ಜಂಟಿಯಾಗಿ ಈ ಮುಷ್ಕರಕ್ಕೆ ಕರೆ ನೀಡಿದ್ದು, ಎಐಬಿಇಎ, ಎಐಬಿಒಎ, ಬಿಇಎಫ್‌ಐ, ಐಎನ್‌ಬಿಇಎಫ್ ಮತ್ತು ಐಎನ್‌ಬಿಒಸಿ ರಾಷ್ಟ್ರೀಯ ಸಾಮಾನ್ಯ ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿವೆ. ಇದಲ್ಲದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ), ಸಹಕಾರಿ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (ಆರ್‌ಆರ್‌ಬಿ), ಭಾರತದ ಜೀವ ವಿಮಾ ನಿಗಮ ಮತ್ತು ಸಾಮಾನ್ಯ ವಿಮಾ ವಲಯದ ನೌಕರರು ಸಹ ಮುಷ್ಕರಕ್ಕೆ ಸೇರುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT