ಕಿರಾರಿಯಲ್ಲಿ ಅಗ್ನಿ ಅವಘಡ 
ದೇಶ

ಕಿರಾರಿ ಅಗ್ನಿ ಅವಘಡ: ದೆಹಲಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ದೆಹಲಿಯ ಹೊರವಲಯದ ಕಿರಾರಿಯಲ್ಲಿನ ಮೂರು ಮಹಡಿಯ ವಸತಿ ಮತ್ತು ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ನವದೆಹಲಿ: ದೆಹಲಿಯ ಹೊರವಲಯದ ಕಿರಾರಿಯಲ್ಲಿನ ಮೂರು ಮಹಡಿಯ ವಸತಿ ಮತ್ತು ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ನಿನ್ನೆ ಮಧ್ಯರಾತ್ರಿ 12.30ರ ಸುಮಾರಿಗೆ ಸಂಭವಿಸಿದ ರ ಈ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳಿಗೂ ತಲಾ 1 ಲಕ್ಷ ರೂಪಾಯಿ ಪರಿಹಾರ ಹಾಗೂ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಹೇಳಿದ್ದಾರೆ.

ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಒಬ್ಬರು ಸುಟ್ಟ ಗಾಯಳಿಂದಾಗಿ ಮೃತಪಟ್ಟಿದ್ದು, ಇತರೆ 8 ಮಂದಿ ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಡಿಎಂ ತನಿಖೆಗೆ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಿರಾರಿ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು, ಐವರು ಹೆಣ್ಣುಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ.

ಕಟ್ಟಡದ ಕೆಳ ಮಹಡಿಯಲ್ಲಿ ಬಟ್ಟೆ ಗೋದಾಮು ಇದ್ದು, ಇನ್ನುಳಿದ ಮೂರು ಮಹಡಿಗಳು ವಸತಿ ಸ್ಥಳಗಳಾಗಿವೆ. 

ಮೃತರನ್ನು ರಾಮ್ ಚಂದ್ರ ಝಾ(65ವ) ಸುಂದರಿಯಾ ದೇವಿ(58ವ), ಸುಂಜು ಜಾ(36ವ), ಉದಯ್ ಚೌಧರಿ(33ವ) ಮತ್ತು ಅವರ ಪತ್ನಿ ಮುಕ್ಸಾನ್(26ವ) ಮತ್ತು ಅವರ ಮಕ್ಕಳಾದ ಅಂಜಲಿ(10ವ), ಆದರ್ಶ್(7) ಮತ್ತು ತುಳಸಿ(6ತಿಂಗಳು) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT