ಪ್ರಮಾಣಪತ್ರದೊಂದಿಗೆ ರಬೀಹಾ 
ದೇಶ

'ಏಕತೆ ಮತ್ತು ಶಾಂತಿಯ ಪಾಠ ಚಿನ್ನದ ಪದಕಕ್ಕಿಂತ ದೊಡ್ಡದು':ರಬೀಹಾ ಅಬ್ದುರೆಹಿಮ್

ರಬೀಹಾ ಅವರು ಚಿನ್ನದ ಪದಕ ಮತ್ತು ಪ್ರಮಾಣಪತ್ರ ಸ್ವೀಕರಿಸುವ ಸರದಿ ಬಂದಾಗ ಪದಕ ನಿರಾಕರಿಸಿ ಕೇವಲ ಎಂಎ ಸರ್ಟಿಫಿಕೇಟ್ ಸ್ವೀಕರಿಸಿದ್ದಾರೆ.

ಪುದುಚೆರಿ(ಚೆನ್ನೈ): ಪುದುಚೆರಿ ವಿಶ್ವವಿದ್ಯಾಲಯ ಘಟಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿನಿ ರಬೀಹಾ ಅಬ್ದುರೆಹಿಮ್ ಗೆ ಭಾಗವಹಿಸಲು ಬಿಡದೆ ಹೊರಗೆ ಕಳುಹಿಸಿದ ಪೊಲೀಸರ ಕ್ರಮ ವಿವಾದಕ್ಕೆ ಕಾರಣವಾಗಿದೆ. ನಂತರ ವಿಶ್ವವಿದ್ಯಾಲಯದ ಚಿನ್ನದ ಪದಕ ತಿರಸ್ಕರಿಸಿದ ವಿದ್ಯಾರ್ಥಿನಿ ರಬೀಹಾ ಅಬ್ದುರೆಹಿಮ್ ತಮ್ಮ ಅಚಲ ನಿರ್ಧಾರದ ಬಗ್ಗೆ ಮಾಧ್ಯಮಗಳಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಘಟಿಕೋತ್ಸವದಲ್ಲಿ ರಾಷ್ಟ್ರಪತಿಗಳು ಸಮಾರಂಭದಿಂದ ಹೊರಹೋಗುವವರೆಗೆ ನನ್ನನ್ನು ಒಳಗೆ ಬಿಡಲಿಲ್ಲ. ನಂತರ ವೇದಿಕೆ ಮೇಲೆ ಪ್ರೊಫೆಸರ್ ರಾಜೀವ್ ಜೈನ್ ಪ್ರಶಸ್ತಿ, ಪದಕ ನೀಡಲು ಮುಂದಾದಾಗ ವಿ.ವಿ ಉಪ ಕುಲಪತಿ ಮತ್ತು ರಿಜಿಸ್ಟ್ರಾರ್ ಮುಂದೆ ಪ್ರತಿಭಟನೆ ಭಾಗವಾಗಿ ಅದನ್ನು ತಿರಸ್ಕರಿಸಿದೆ ಎನ್ನುತ್ತಾರೆ ರಬೀಹಾ.

ಇನ್ನೂ ಹಲವು ಚಿನ್ನದ ಪದಕ ವಿಜೇತರು ಮತ್ತು ವಿದ್ಯಾರ್ಥಿಗಳು ಘಟಿಕೋತ್ಸವನ್ನು ಬಹಿಷ್ಕರಿಸಿ ಸಿಎಎ ಮತ್ತು ಎನ್ ಆರ್ ಸಿ  ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ರಬೀಹಾ ಅವರು ಚಿನ್ನದ ಪದಕ ಮತ್ತು ಪ್ರಮಾಣಪತ್ರ ಸ್ವೀಕರಿಸುವ ಸರದಿ ಬಂದಾಗ ಪದಕ ನಿರಾಕರಿಸಿ ಕೇವಲ ಎಂಎ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. 


ಈ ಘಟನೆ ನನ್ನಲ್ಲಿ ಒಂದು ನಿಲುವು ತಳೆಯುವಂತೆ ಮಾಡಿದೆ. ನನಗೆ ಅವಮಾನ ಮಾಡಿದ್ದಾರೆ ಎಂದು ನಾನು ಚಿನ್ನದ ಪದಕ ಹಿಂತಿರುಗಿಸಲಿಲ್ಲ. ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ನನ್ನ ಸಹಪಾಠಿಗಳಿಗೆ ಬೆಂಬಲವಾಗಿ ಈ ಪದಕ ಹಿಂತಿರುಗಿಸಿದ್ದೇನೆ ಎಂದು ರಬೀಹಾ ಹೇಳಿದ್ದಾರೆ.


ಇಂದು ಯುವಜನತೆಗೆ ಶಿಕ್ಷಣ ಏನು ಕಲಿಸುತ್ತಿದೆ ಎಂದು ಜಗತ್ತಿಗೆ ನಾನು ತೋರಿಸುತ್ತಿದ್ದೇನೆ, ಐಕ್ಯತೆ ಮತ್ತು ಶಾಂತಿಯ ಪಾಠ ಈ ಪದಕ, ಪ್ರಶಸ್ತಿಗಳಿಗಿಂತ ಹೆಚ್ಚು ಮೌಲ್ಯಯುತವಾದುದು. ಈ ವಿಷಯದಲ್ಲಿ ನನ್ನ ಆಲೋಚನೆ, ಸಂದೇಶ ಸ್ಪಷ್ಟವಾಗಿದೆ ಎಂದು ಕೇರಳದ ಕೋಜಿಕ್ಕೋಡ್  ಮೂಲದ ರಬೀಹಾ ಹೇಳುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT