ಶ್ರೀನಗರದಲ್ಲಿ ಮಂಜಿನ ನಡುವೆ ಸೈನಿಕರ ಕರ್ತವ್ಯ 
ದೇಶ

ಕಾಶ್ಮೀರದಿಂದ 7 ಸಾವಿರ ಅರೆಸೇನಾ ಪಡೆ ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಆದೇಶ 

ಕಾಶ್ಮೀರದಲ್ಲಿ ಭದ್ರತಾ ಪರಿಶೀಲನೆ ನಂತರ ಕೂಡಲೇ 7 ಸಾವಿರ ಅರೆಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕಾಶ್ಮೀರದಲ್ಲಿ ಭದ್ರತಾ ಪರಿಶೀಲನೆ ನಂತರ ಕೂಡಲೇ 7 ಸಾವಿರ ಅರೆಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಒಟ್ಟು 72 ತುಕಡಿಗಳನ್ನು ತಮ್ಮ  ಕ್ಷೇತ್ರಗಳಿಗೆ ಮರಳುವಂತೆ ಆದೇಶಿಸಲಾಗಿದೆ.  ಇಂತಹ ಒಂದು ತುಕಡಿಯಲ್ಲಿ 100 ಸೈನಿಕರು ಇರುತ್ತಾರೆ ಎಂದು ಅವರು ಹೇಳಿದ್ದಾರೆ. 

ಜಮ್ಮು- ಕಾಶ್ಮೀರದಲ್ಲಿ ಸಂವಿಧಾನದ ಕಲಂ 370 ರದ್ದುಗೊಳಿಸಿದ ನಂತರ ಸಿಆರ್ ಪಿಎಫ್, ಬಿಎಸ್ ಎಫ್, ಐಟಿಬಿಪಿ, ಸಿಐಎಸ್ ಎಫ್ ಮತ್ತು ಎಸ್ ಎಸ್ ಬಿಯನ್ನು ಕಣಿವೆ ಪ್ರದೇಶದಲ್ಲಿನ ಭದ್ರತೆಗಾಗಿ ನಿಯೋಜಿಸಲಾಗಿತ್ತು. 

ಸೋಮವಾರ ಹೊರಡಿಸಿರುವ ಆದೇಶದಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 24 ತುಕಡಿಗಳು,  ಬಿಎಸ್ ಎಫ್, ಸಿಐಎಸ್ ಎಫ್, ಐಟಿಬಿಪಿ ಮತ್ತು ಸಶಸ್ತ್ರ ಸೀಮಾ ಬಲದ ತಲಾ 12 ತುಕಡಿಗಳನ್ನು ಮರಳಿ  ತಮ್ಮ ಕ್ಷೇತ್ರಗಳಿಗೆ ಕಳುಹಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಇಂತಹ 20 ತುಕಡಿಗಳನ್ನು ಹಿಂಪಡೆಯಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT