ರಬೀಹಾ ಅಬ್ದುರೆಹಿಮಾ 
ದೇಶ

ಚಿನ್ನದ ಪದಕ ವಿಜೇತೆ ರಬೀಹಾ ಪರ ನಿಂತ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ 

ಪುದುಚೆರಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ರಬೀಹಾ ಅಬ್ದುರೆಹಿಮಾ ನಿರ್ಧಾರವನ್ನು ಬೆಂಬಲಿಸಿ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಪುದುಚೆರಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ರಬೀಹಾ ಅಬ್ದುರೆಹಿಮಾ ನಿರ್ಧಾರವನ್ನು ಬೆಂಬಲಿಸಿ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿದ್ದಾರೆ.


ಘಟಿಕೋತ್ಸವದಿಂದ ವಿದ್ಯಾರ್ಥಿನಿ ರಬೀಹಾರನ್ನು ಹೊರಗಿಡುವ ಮೂಲಕ ಅವರ ಹಕ್ಕುಗಳನ್ನು ಕಸಿಯಲಾಗಿದೆ. ಅವರನ್ನು ಹೊರಗಿಡುವ ನಿರ್ಧಾರ ಮಾಡಿದ ಅಧಿಕಾರಿ ಯಾರು? ವಿದ್ಯಾರ್ಥಿನಿಯ ನಾಗರಿಕ ಹಕ್ಕುಗಳನ್ನು ಕಸಿದ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.


ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗವಹಿಸಿದ್ದ ಪುದುಚೆರಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಚಿನ್ನದ ಪದಕ ಗೆದ್ದ ರಬೀಹಾ ಅಬ್ದುರೆಹಿಮಾರನ್ನು ಹೊರಗೆ ಕಳುಹಿಸಲಾಗಿತ್ತು. ಕೇರಳ ಮೂಲದ ರಬೀಹಾ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. 


ಸಮಾರಂಭದಿಂದ ಹೊರಗೆ ಕಳುಹಿಸಲು ನಿಖರವಾದ ಕಾರಣವೇನೆಂದು ತಮಗೆ ಗೊತ್ತಾಗಲಿಲ್ಲ ಎಂದು ರಬೀಹಾ ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT