ರಾಹುಲ್ ಮತ್ತು ಪ್ರಿಯಾಂಕಾ ವಾದ್ರಾ 
ದೇಶ

'ರಾಹುಲ್ ಮತ್ತು ಪ್ರಿಯಾಂಕಾ  ಜೀವಂತ ಪೆಟ್ರೋಲ್​ ಬಾಂಬ್​ಗಳು, ಹೋದಲ್ಲೆಲ್ಲ ಬೆಂಕಿ ಹೊತ್ತಿಸುತ್ತಾರೆ'

ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್​ ಗಾಂಧಿ ವಿರುದ್ಧ ಹರಿಯಾಣ ಸಚಿವ ಮತ್ತು ಬಿಜೆಪಿ ನಾಯಕ ಅನಿಲ್​ ವಿಜ್​ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹರ್ಯಾಣ: ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್​ ಗಾಂಧಿ ವಿರುದ್ಧ ಹರಿಯಾಣ ಸಚಿವ ಮತ್ತು ಬಿಜೆಪಿ ನಾಯಕ ಅನಿಲ್​ ವಿಜ್​ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನಿನ್ನೆ ಉತ್ತರ ಪ್ರದೇಶದಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ಮೇರಠ್​ಗೆ ತೆರಳಿದ್ದರು. ಆದರೆ ಅವರನ್ನು ಪೊಲೀಸರು ಮುಂದಡಿ ಇಡಲು ಬಿಟ್ಟಿರಲಿಲ್ಲ.

ಅದಾದ ಕೆಲವೇ ಹೊತ್ತಲ್ಲಿ ಹರಿಯಾಣ ಸಚಿವ ಅನಿಲ್​ ವಿಜ್​ ಅವರು ಟ್ವೀಟ್​ ಮಾಡಿ ಇವರಿಬ್ಬರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆ ಇರಲಿ. ಅವರಿಬ್ಬರೂ ಜೀವಂತ ಪೆಟ್ರೋಲ್​ ಬಾಂಬ್​ಗಳು. ಹೋದಲ್ಲೆಲ್ಲ ಬೆಂಕಿ ಹೊತ್ತಿಸುತ್ತಾರೆ. ಸಾರ್ವಜನಿಕ ಆಸ್ತಿಪಾಸ್ತಿಗಳ ನಾಶಕ್ಕೆ ಕಾರಣವಾಗುತ್ತಾರೆ ಎಂದು ಅನಿಲ್​ ವಿಜ್​ ಅವರು ಟ್ವೀಟ್ ಮಾಡಿದ್ದಾರೆ.

ಹರಿಯಾಣ ಸಚಿವ ಅನಿಲ್​ ವಿಜ್​ ಅವರು ವಿವಾದಾತ್ಮಕ ಹೇಳಿಕೆಗಳಿಂದಲೇ ಖ್ಯಾತರಾದವರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT