ರಾಷ್ಟ್ರಪತಿ ರಾಮನಾಥ್ ಕೋವಿಂದ್-ಪ್ರಧಾನಿ ನರೇಂದ್ರ ಮೋದಿ 
ದೇಶ

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ: ರಾಷ್ಟ್ರಪತಿ, ಪ್ರಧಾನಿ ಭಾಗಿ 

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ. 

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ್ ಅಟಲ್ ಸ್ಮಾರಕ ಬಳಿ ತೆರಳಿ ಅಗಲಿದ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿಯನ್ನು ಸ್ಮರಿಸಿದ್ದಾರೆ.


ಭಾರತೀಯ ಜನತಾ ಪಾರ್ಟಿ ವತಿಯಿಂದ ಸ್ಮಾರಕ ಬಳಿ ಭಜನೆ, ಗೀತ ಗಾಯನ ಕಾರ್ಯಕ್ರಮ ನಡೆದಿದೆ.


ಇಂದು ಪ್ರಧಾನಿ ಮೋದಿ ಲಕ್ನೊದ ಲೋಕ ಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ರಾಜಕೀಯ ಜೀವನ ಕಂಡುಕೊಂಡಿದ್ದು ಲಕ್ನೊ ಲೋಕಸಭಾ ಕ್ಷೇತ್ರದಿಂದಲೇ. 1991, 1998, 1999 ಮತ್ತು 2004ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಬಂದಿದ್ದರು. 
ಈ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ ಇಲ್ಲಿ ವಾಜಪೇಯಿ ಪ್ರತಿಮೆ ಅನಾವರಣಗೊಳ್ಳಲಿದೆ. ಸಮಾರಂಭ ನಡೆಯುವ ಸ್ಥಳ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವುದರಿಂದ ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ವಿಶೇಷ ಭದ್ರತೆ ಒದಗಿಸಲಾಗುತ್ತಿದೆ. 


ಇದೇ ಸಂದರ್ಭದಲ್ಲಿ ಮೋದಿಯವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025| ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ರಾಜ್ಯದಲ್ಲಿ ಹಲವೆಡೆ IMD Yellow alert; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT