ನರೇಂದ್ರ ಮೋದಿ-ಸುಬ್ರಮಣಿಯನ್ ಸ್ವಾಮಿ 
ದೇಶ

ದೇಶದ ಆರ್ಥಿಕ ಸ್ಥಿತಿ ಸರಿಪಡಿಸದಿದ್ದರೆ ಬಿಜೆಪಿ ಮುಕ್ತ ಭಾರತ ಖಚಿತ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದ್ದು ಅದನ್ನು ಸರಿದಾರಿಗೆ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ಎಂಬುದು ವಾಸ್ತವ ರೂಪಕ್ಕೆ ಬರುವ ಸಾಧ್ಯತೆಗಳು ಹೆಚ್ಚು ಎಂದು ಪಕ್ಷದ ಹಿರಿಯ ನಾಯಕ ರಾಜ್ಯಸಭಾ ಸದಸ್ಯ, ಡಾ. ಸುಬ್ರಮಣಿಯನ್ ಸ್ವಾಮಿ ಬಿಜೆಪಿ  ವರಿಷ್ಠರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದ್ದು ಅದನ್ನು ಸರಿದಾರಿಗೆ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ಎಂಬುದು ವಾಸ್ತವ ರೂಪಕ್ಕೆ ಬರುವ ಸಾಧ್ಯತೆಗಳು ಹೆಚ್ಚು ಎಂದು ಪಕ್ಷದ ಹಿರಿಯ ನಾಯಕ ರಾಜ್ಯಸಭಾ ಸದಸ್ಯ, ಡಾ. ಸುಬ್ರಮಣಿಯನ್ ಸ್ವಾಮಿ ಬಿಜೆಪಿ  ವರಿಷ್ಠರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
 
ದೇಶದ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಸಲಹೆ ನೀಡುತ್ತಿರುವವರ  ವಿರುದ್ದ ಡಾ. ಸ್ವಾಮಿ ಕೆಂಡ ಕಾರಿದ್ದಾರೆ. ಸಲಹೆಗಾರರು ಪ್ರಧಾನಿಯನ್ನು ಕತ್ತಲೆಯಲ್ಲಿರಿಸಿದ್ದಾರೆ. ಆರ್ಥಿಕತೆಯನ್ನು  ಸರಿಯಾದ ದಾರಿಯಲ್ಲಿ ಮುನ್ನಡೆಸಲು ಏನಾದರೂರೀಗ ಮಾಡದಿದ್ದರೆ. ಬಿಜೆಪಿ ಮುಕ್ತ ಭಾರತ ವಾಸ್ತವ ರೂಪದಲ್ಲಿ  ಎದುರಾಗಲಿದೆ ಎಂದು ಕಟು ಭವಿಷ್ಯ ನುಡಿದಿದ್ದಾರೆ.

ಪ್ರಧಾನಮಂತ್ರಿಗಳಿಗೆ ಸಲಹೆ ನೀಡುವವರು ಯಾರು? ಎಂಬುದು ತಮಗೆ ಗೊತ್ತಿಲ್ಲ. ಪ್ರಧಾನಿಗೆ ದೇಶದ ಆರ್ಥಿಕ ಸ್ಥಿತಿ ಗತಿಯ ಸತ್ಯವನ್ನು ಮಾತ್ರ ಅವರು ಹೇಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ  ಹೀನಾಯ  ಸೋಲು ಅನುಭವಿಸಿರುವ  ಹಿನ್ನೆಲೆಯಲ್ಲಿ  ಡಾ. ಸುಬ್ರಮಣಿಯನ್ ಸ್ವಾಮಿ ಈ ಎಚ್ಚರಿಕೆ ನೀಡಿದ್ದಾರೆ. 

ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿ ಜಾರ್ಖಂಡ್‌ನಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿ ವಿಫಲವಾಗಿದೆ. ಹರಿಯಾಣದಲ್ಲಿ ಜೆಜೆಪಿಯ ಬೆಂಬಲದಿಂದ ಬಿಜೆಪಿ ಸರ್ಕಾರ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT