ವಾರಾಣಾಸಿಯಲ್ಲಿ ಪೊಲೀಸರ ಗಸ್ತು 
ದೇಶ

ಶುಕ್ರವಾರ ಪ್ರಾರ್ಥನೆ ಹಿನ್ನೆಲೆ: ಉತ್ತರ ಪ್ರದೇಶದ ವಿವಿಧೆಡೆ ಇಂಟರ್ ನೆಟ್ ಕಟ್, ಡ್ರೋಣ್ ನಿಯೋಜನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ  ಪ್ರತಿಭಟನೆ ವೇಳೆಯಲ್ಲಿ ಸಂಭವಿಸಿದ್ದ ವ್ಯಾಪಕ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಪ್ರಾರ್ಥನೆ ವೇಳೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಭದ್ರತೆ ಹಾಗೂ ಪೊಲೀಸರ ಗಸ್ತನ್ನು ಹೆಚ್ಚಿಸಲಾಗಿದೆ.

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ  ನಡೆದ ಪ್ರತಿಭಟನೆ ವೇಳೆಯಲ್ಲಿ ಸಂಭವಿಸಿದ್ದ ವ್ಯಾಪಕ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಪ್ರಾರ್ಥನೆ ವೇಳೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಭದ್ರತೆ ಹಾಗೂ ಪೊಲೀಸರ ಗಸ್ತನ್ನು ಹೆಚ್ಚಿಸಲಾಗಿದೆ.

ವದಂತಿ, ಸುಳ್ಳು ಸುದ್ದಿ ಹರಡದಂತೆ  ತಡೆಯುವ ನಿಟ್ಟಿನಲ್ಲಿ  ಗಾಜಿಯಾಬಾದ್ ಮತ್ತಿತರ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಗೋರಕ್ ಪುರದಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಹಿಂಸಾಚಾರ ಮರುಕಳಿಸದಂತೆ ಮಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಎಲ್ಲಾ ಪೊಲೀಸ್ ಠಾಣೆ ಪ್ರದೇಶ ಹಾಗೂ ವೃತ್ತಗಳಲ್ಲಿ ಶಾಂತಿ ಸೌಹಾರ್ದತ ಸಭೆಗಳನ್ನು ಆಯೋಜಿಸಲಾಗಿದೆ. 

ಶುಕ್ರವಾರ ಸೂಕ್ತ ಭದ್ರತೆ ಒದಗಿಸಲು ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಡ್ರೋಣ್ ಕ್ಯಾಮರಾಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಡಿಎಂ ವಿಜಯೇಂದ್ರ ಪಾಂಡಿಯನ್ ತಿಳಿಸಿದ್ದಾರೆ. 

ಈ ಮಧ್ಯೆ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ 372 ಜನರ ವಿರುದ್ಧ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ನಡೆದ ಹಿಂಸಾಚಾರದಲ್ಲಿ 19 ಮಂದಿ ಮೃತಪಟ್ಟಿದ್ದರು.  61 ಮಂದಿ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 288 ಪೊಲೀಸರು ಗಾಯಗೊಂಡಿದ್ದರು.  ಈ ಸಂಬಂಧ 327 ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದ್ದು, 1 ಸಾವಿರದ 113 ಮಂದಿಯನ್ನು ಬಂಧಿಸಲಾಗಿದೆ  ಎಂದು ಗೃಹ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT