ಪ್ರಧಾನಿ ಮೋದಿಗಾಗಿ ಗುಡಿ ಕಟ್ಟಿದ ತಮಿಳುನಾಡು ರೈತ 
ದೇಶ

ಪ್ರಧಾನಿ ಮೋದಿಗಾಗಿ ಗುಡಿ ಕಟ್ಟಿದ ತಮಿಳುನಾಡು ರೈತ

ತಮಿಳುನಾಡಿನ ತಿರುಚಿರಾಪಳ್ಳಿಯ ರೈತನೊಬ್ಬ ತನ್ನ ಹೊಲದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಾಗಿ ಗುಡಿಯೊಂದನ್ನು ನಿರ್ಮಾಣ ಮಾಡಿದ್ದಾನೆ. 

ಕೊಯಮತ್ತೂರು: ತಮಿಳುನಾಡಿನ ತಿರುಚಿರಾಪಳ್ಳಿಯ ರೈತನೊಬ್ಬ ತನ್ನ ಹೊಲದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಾಗಿ ಗುಡಿಯೊಂದನ್ನು ನಿರ್ಮಾಣ ಮಾಡಿದ್ದಾನೆ. 

ಏರಾಕುಡಿ ಗ್ರಾಮದ 50 ವರ್ಷದ ಪಿ.ಶಂಕರ್ ಎನ್ನುವವರು ತಮ್ಮ ಹೊಲದಲ್ಲಿ ನಿರ್ಮಿಸಿದ ಮೋದಿ ದೇವಾಲಯವನ್ನು ಕಲೆದ ವಾರ ಉದ್ಘಾಟನೆ ಮಾಡಿದ್ದಾರೆ. 

ಈ ಗುಡಿ 8 ಚದರ ಅಡಿ ವಿಸ್ತೀರ್ಣ ಇದ್ದು, ಗುಡಿಯಲ್ಲಿರುವ ಮೋದಿ ಪ್ರತಿಮೆಗೆ ಅವರು ಪ್ರತೀನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿಅವರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಂತಹ ಕಲ್ಯಾಣ ಯೋಜನೆಯಿಂದ ಪ್ರಭಾವಿತಗೊಂಡು ಗುಂಡಿಯನ್ನು ನಿರ್ಮಿಸಿದ್ದೇನೆ. ಈ ಗುಡಿ ನಿರ್ಮಾಣಕ್ಕೆ ರೂ.1.2 ಲಕ್ಷ ವೆಚ್ಚವಾಗಿದೆ ಎಂದು ಶಂಕರ್ ತಿಳಿಸಿದ್ದಾರೆ. 

ಅಯ್ಯ (ಮೋದಿ) ಅವರಿಗಾಗಿ ದೇಗುಲ ನಿರ್ಮಾಣ ಮಾಡಲು 8 ತಿಂಗಳ ಹಿಂದೆಯೇ ಆಲೋಚನೆ ನಡೆಸಿದ್ದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ಇದೀಗ ವಾರಗಳ ಹಿಂದೆ ದೇಗುಲ ಉದ್ಘಾಟನೆ ಮಾಡಲಾಯಿತು ಎಂದಿದ್ದಾರೆ. 

ಪ್ರಧಾನಮಂತ್ರಿ ಕಿಸಾನ್ ಸಮ್ಮನಾ ನಿಧಿಯಿಂದ ರೂ.2,000 ಬರುತ್ತಿದೆ. ವೈಯಕ್ತಿಕವಾಗಿಯೂ ಮೋದಿಯೆಂದರೆ ನನಗೆ ಬಹಳ ಇಷ್ಟ. ಅವರನ್ನು ಬಹಳ ವರ್ಷದಿಂದ ನೋಡುತ್ತಲೇ ಇದ್ದೇನೆಂದಿದ್ದಾರೆ. 

ಇನ್ನು ಸಂಕರ್ ಅವರು ಬಿಜೆಪಿ ಕಾರ್ಯಕರ್ತರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಇವರು ಯಾವುದೇ ಸ್ಥಳೀಯ, ರಾಷ್ಟೀಯ ಮಂಡಳಿಗಳಲ್ಲಿ ಸದಸ್ಯರಲ್ಲ ಎಂಬುದು ಖಚಿತಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT