ಪ್ರತಿಭಟನಾನಿರತ ಮಹಿಳೆಯರು 
ದೇಶ

ಶಾಹೀನ್ ಬಾಗ್‌: ಕೊರೆಯುವ ಚಳಿಯಲ್ಲೂ ಸಿಎಎ ವಿರುದ್ಧ ಅಹೋರಾತ್ರಿ ಮಹಿಳೆಯರ ಪ್ರತಿಭಟನೆ

ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ  ವಿರೋಧಿಸಿ  ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ನವದೆಹಲಿ: ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ  ವಿರೋಧಿಸಿ  ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಡಿಸೆಂಬರ್ 14ರಿಂದ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ನೊಯ್ಡಾ ಹಾಗೂ ದಕ್ಷಿಣ ದೆಹಲಿ ನಡುವಣ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಧಾರ್ಮಿಕ ಮುಖಂಡರು ಹಾಗೂ ಸ್ಥಳೀಯರ ಜೊತೆಗೆ ಕಳೆದ ಐದು ದಿನಗಳಿಂದ ಅನೇಕ ಸಭೆಗಳನ್ನು ನಡೆಸುವ ಮೂಲಕ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ಪಡೆಯುವವರೆಗೂ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆದ ಹಿಂಸಾಚಾರದ ವೇಳೆಯಲ್ಲೂ ಶಾಹೀನ್ ಬಾಗ್ ಮಹಿಳೆಯರು ಮುಂಚೂಣಿಯಲ್ಲಿದ್ದರು. 

ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದರಿಂದ ಸ್ಥಳೀಯ ಧಾರ್ಮಿಕ ಮುಖಂಡರನ್ನು ಕರೆಸಿ ಪರಿಸ್ಥಿತಿಯನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದರೆ, ಬಲವಂತದಿಂದ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಯೋಚಿಸಿದ್ದರು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. 

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂರ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಎನ್ ಆರ್ ಸಿ ಜಾರಿಗೆ ಬಂದ ಮೇಲೆ ಅಸ್ಸಾಂ ಮತ್ತಿತರ ಕಡೆಗಳಲ್ಲಿ ತೀವ್ರ ಪರಿಣಾಮ ಬೀರಲಿದೆ. ಆ  ಅನ್ಯಾಯಕ್ಕೆ ಸಾಕ್ಷಿಯಾಗಬಾರದೆಂಬ ಉದ್ದೇಶದಿಂದ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿರುವುದಾಗಿ ಪ್ರತಿಭಟನಾಕಾರರು ಹೇಳುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT