ಪ್ರತಿಭಟನಾನಿರತ ಮಹಿಳೆಯರು 
ದೇಶ

ಶಾಹೀನ್ ಬಾಗ್‌: ಕೊರೆಯುವ ಚಳಿಯಲ್ಲೂ ಸಿಎಎ ವಿರುದ್ಧ ಅಹೋರಾತ್ರಿ ಮಹಿಳೆಯರ ಪ್ರತಿಭಟನೆ

ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ  ವಿರೋಧಿಸಿ  ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ನವದೆಹಲಿ: ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ  ವಿರೋಧಿಸಿ  ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಡಿಸೆಂಬರ್ 14ರಿಂದ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ನೊಯ್ಡಾ ಹಾಗೂ ದಕ್ಷಿಣ ದೆಹಲಿ ನಡುವಣ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಧಾರ್ಮಿಕ ಮುಖಂಡರು ಹಾಗೂ ಸ್ಥಳೀಯರ ಜೊತೆಗೆ ಕಳೆದ ಐದು ದಿನಗಳಿಂದ ಅನೇಕ ಸಭೆಗಳನ್ನು ನಡೆಸುವ ಮೂಲಕ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ಪಡೆಯುವವರೆಗೂ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆದ ಹಿಂಸಾಚಾರದ ವೇಳೆಯಲ್ಲೂ ಶಾಹೀನ್ ಬಾಗ್ ಮಹಿಳೆಯರು ಮುಂಚೂಣಿಯಲ್ಲಿದ್ದರು. 

ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದರಿಂದ ಸ್ಥಳೀಯ ಧಾರ್ಮಿಕ ಮುಖಂಡರನ್ನು ಕರೆಸಿ ಪರಿಸ್ಥಿತಿಯನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದರೆ, ಬಲವಂತದಿಂದ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಯೋಚಿಸಿದ್ದರು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. 

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂರ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಎನ್ ಆರ್ ಸಿ ಜಾರಿಗೆ ಬಂದ ಮೇಲೆ ಅಸ್ಸಾಂ ಮತ್ತಿತರ ಕಡೆಗಳಲ್ಲಿ ತೀವ್ರ ಪರಿಣಾಮ ಬೀರಲಿದೆ. ಆ  ಅನ್ಯಾಯಕ್ಕೆ ಸಾಕ್ಷಿಯಾಗಬಾರದೆಂಬ ಉದ್ದೇಶದಿಂದ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿರುವುದಾಗಿ ಪ್ರತಿಭಟನಾಕಾರರು ಹೇಳುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT