ಪ್ರತಿಭಟನಾಕಾರರು 
ದೇಶ

ಪೌರತ್ವ ಪ್ರತಿಭಟನೆ: ದೆಹಲಿಯ ಉತ್ತರ ಪ್ರದೇಶ ಭವನದ ಬಳಿ ಪ್ರತಿಭಟನಾಕಾರರ ಬಂಧನ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ದೆಹಲಿಯ ಉತ್ತರ ಪ್ರದೇಶ ಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ದೆಹಲಿಯ ಉತ್ತರ ಪ್ರದೇಶ ಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಘಟಕದ ಕಾರ್ಯಕರ್ತನ್ನು ಒಳಗೊಂಡ ಜಾಮಿಯಾ ಸಮನ್ವಯ ಸಮಿತಿ ಉತ್ತರ ಪ್ರದೇಶ ಭವನ ಮುತ್ತಿಗೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭವನದ ಬಳಿ ಭಾರಿ ಭದ್ರತ್ರೆ ಏರ್ಪಡಿಸಲಾಗಿತ್ತು.

ಪ್ರತಿಭಟನಾಕಾರರು ಉತ್ತರ ಪ್ರದೇಶ ಭವನದ ಬಳಿ ಆಗಮಿಸುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು, ಮಂದಿರ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ದರು.

ಇಂದು ಬೆಳಗ್ಗೆ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಮತ್ತು ದೆಹಲಿ ಮಾಜಿ ಶಾಸಕ ಸೋಯಿಬ್ ಇಖ್ಬಾಲ್ ಸೇರಿದಂತೆ ಹಲವು ನಾಯಕರು ದೆಹಲಿಯ ಜಾಮಾ ಮಸೀದಿ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಅಲ್ಕಾ ಲಾಂಬಾ ಅವರು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ನಿರುದ್ಯೋಗ ನಿಜವಾದ ಸಮಸ್ಯೆಯಾಗಿದ್ದು, ಪ್ರಧಾನಿ ಮೋದಿ ಈ ಬಗ್ಗೆ ಗಮನಹರಿಸುವ ಬದಲು ಎನ್ ಆರ್ ಸಿಗಾಗಿ ಜನರನ್ನು ಕ್ಯೂನಲ್ಲಿ ನಿಲ್ಲುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT