ಡ್ಯಾನಿಶ್ ಕನೇರಿಯಾ 
ದೇಶ

ಪೌರತ್ವ ತಿದ್ದುಪಡಿ ಕಾಯ್ದೆಯಡಿ ಕನೇರಿಯಾ ಭಾರತಕ್ಕೆ ಬರಬಹುದು-ಯುಪಿ ಸಚಿವ ಮೊಹ್ಸಿನ್ ರಾಜಾ

ಪಾಕಿಸ್ತಾನದ  ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅಲ್ಲಿ ತಾರತಮ್ಯಕ್ಕೊಳಗಾಗಿದ್ದರೆ  ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತಕ್ಕೆ ಮುಕ್ತವಾಗಿ ಬರಬಹುದು  ಎಂದು ಉತ್ತರ ಪ್ರದೇಶದ ಸಚಿವ ಮೊಹ್ಸಿನ್ ರಾಜಾ ಹೇಳಿದ್ದಾರೆ.

ಲಖನೌ: ಪಾಕಿಸ್ತಾನದ  ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅಲ್ಲಿ ತಾರತಮ್ಯಕ್ಕೊಳಗಾಗಿದ್ದರೆ  ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತಕ್ಕೆ ಮುಕ್ತವಾಗಿ ಬರಬಹುದು  ಎಂದು ಉತ್ತರ ಪ್ರದೇಶದ ಸಚಿವ ಮೊಹ್ಸಿನ್ ರಾಜಾ ಹೇಳಿದ್ದಾರೆ.

ಪಾಕಿಸ್ತಾನದ ಮತ್ತೊಬ್ಬ ಆಟಗಾರ ಮೊಹಮ್ಮದ್ ಯೂಸಫ್ ಕೂಡಾ ಅದೇ ರೀತಿಯ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಅವರು ಕ್ರಿಶ್ಚಿಯನ್ ಆಗಿದ್ದು, ನಿಜವಾದ ಹೆಸರು ಯೂಸಫ್ ಯುಹಾನಾ ಆಗಿದೆ ಎಂದು ರಾಜಾ ತಿಳಿಸಿದ್ದಾರೆ. 

ಡ್ಯಾನಿಶ್ ಕನೇರಿಯಾ ಅವರ ಮೂಲ ಹೆಸರು ದಿನೇಶ್ ಕನೇರಿಯಾ. ಆದರೆ, ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮೊಹಮ್ಮದ್ ಯೂಸಫ್ ಕೂಡಾ ಅದೇ ರೀತಿಯಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಡಿ ಅವರು ಭಾರತಕ್ಕೆ ಬರಬಹುದಾಗಿದೆ. ಅವರನ್ನು ನಾವು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.

ಹಿಂದೂವಾಗಿರುವ ಕಾರಣಕ್ಕೆ  ಕನೇರಿಯಾ ಅವರನ್ನು ಪಾಕಿಸ್ತಾನ ತಂಡದ ಭಾಗವಾಗಲು ಇಷ್ಟಪಡದ ಅನೇಕರು ಇದ್ದಾರೆ ಎಂದು ಪಿಟಿವಿ ಕಾರ್ಯಕ್ರಮದ "ಗೇಮ್ ಆನ್ ಹೈ" ಶೀರ್ಷಿಕೆಯ ಸಂದರ್ಶನವೊಂದರಲ್ಲಿ, ಅಖ್ತರ್   ಆರೋಪಿಸಿದ್ದರು. ಇದರ ಬೆನ್ನಲ್ಲೇ ಹೇಳಿಕೆ ಬಿಡುಗಡೆ ಮಾಡಿದ್ದ ಕನೇರಿಯಾ, ನನ್ನ ಜೀವನ ಉತ್ತಮ ಸ್ಥಿತಿಯಲ್ಲಿ ಇಲ್ಲ. ಈ ಅವ್ಯವಸ್ಥೆಯಿಂದ ಹೊರಬರಲು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಸಹಾಯ ಮಾಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದರು.

 62 ಟೆಸ್ಟ್‌ಗಳಲ್ಲಿ 261 ವಿಕೆಟ್‌ಗಳನ್ನು ಹೊಂದಿರುವ ಲೆಗ್ ಸ್ಪಿನ್ನರ್ ಕನೇರಿಯಾ ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದ ಅತ್ಯುತ್ತಮ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT