ರಣಜಿ: ಕರ್ನಾಟಕಕ್ಕೆ 1, ಹಿಮಾಚಲ ಪ್ರದೇಶಗೆ 3 ಅಂಕ 
ದೇಶ

ರಣಜಿ: ಕರ್ನಾಟಕಕ್ಕೆ 1, ಹಿಮಾಚಲ ಪ್ರದೇಶಗೆ 3 ಅಂಕ

ಇಲ್ಲಿ ನಡೆದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ನಡುವಿನ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಆತಿಥೇಯ ತಂಡ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದರಿಂದ ಒಂದು ಅಂಕ ಕಲೆ ಹಾಕಿದೆ. 

ಮೈಸೂರು: ಇಲ್ಲಿ ನಡೆದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ನಡುವಿನ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಆತಿಥೇಯ ತಂಡ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದರಿಂದ ಒಂದು ಅಂಕ ಕಲೆ ಹಾಕಿದೆ. 
  
ಶನಿವಾರ 3 ವಿಕೆಟ್ ಗೆ 191 ರನ್ ಗಳಿಂದ ಆಟ ಮುಂದುವರಿಸಿದ ಕರ್ನಾಟಕ ತಂಡ, 296 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಕರ್ನಾಟಕ ಮೂರು ಪಂದ್ಯಗಳಿಂದ 10 ಅಂಕ ಕಲೆ ಹಾಕಿದೆ. 
  
ಕರ್ನಾಟಕ ತಂಡದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ನಾಯಕ ಕರುಣ್ ನಾಯರ್ ಹಾಗೂ ಭರವಸೆಯ ಎಡಗೈ ಬ್ಯಾಟ್ಸ್ ಮನ್ ದೇವದತ್ ಪಡಿಕ್ಕಲ್ ನೀಡಿದರು. ಈ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿ ಎದುರಾಳಿ ತಂಡಕ್ಕೆ ಕಾಡಿತು. ಈ ಜೋಡಿಯನ್ನು ಬೇರ್ಪಡಿಸಲು ಹಿಮಾಚಲ ಮಾಡಿಕೊಂಡ ಪ್ಲಾನ್ ಕೈ ಕೊಟ್ಟಿತು. 
  
ಅಂತಿಮವಾಗಿ ಕರುಣ್ ನಾಯರ್ ಆಟ 64 ರನ್ ಗಳಿಗೆ ಸೀಮಿತವಾಯಿತು. ಮಧ್ಯಮ ಕ್ರಮಾಂಕದ ದೇವದತ್ ಶತಕ ವಂಚಿತರಾದರು. 201 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 99 ರನ್ ಬಾರಿಸಿದ ಇವರು ಆರೋರ್ ತೋಡಿದ ಖೆಡ್ಡಾಗೆ ಬಲಿಯಾದರು. 
  
ಉಳಿದಂತೆ ಬಿ.ಆರ್.ಶರತ್ 42, ಅಭಿಮನ್ಯು ಮಿಥುನ್ 22 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಹಿಮಾಚಲ ತಂಡದ ಪರ ರಿಷಿ ಧವನ್ 5, ವೈಭವ್ ಆರೋರ್ ಹಾಗೂ ಮಯಾಂಕ್ ದಗಾರ್ ತಲಾ ಎರಡು ವಿಕೆಟ್ ಕಬಳಿಸಿದರು. 182 ರನ್ ಗಳ ಗುರಿಯನ್ನು ಹಿಂಬಾಲಿಸಿದ ಹಿಮಾಚಲ ತಂಡದ ಆರಂಭವೂ ಕಳಪೆಯಾಗಿತ್ತು. 34 ರನ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಹಿಮಾಚಲ ಮುನ್ನುಗುತ್ತಿದ್ದಾಗ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ರಿಷಿ ಧವನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
  
ಸಂಕ್ಷಿಪ್ತ ಸ್ಕೋರ್

  
ಕರ್ನಾಟಕ ಮೊದಲ ಇನ್ನಿಂಗ್ಸ್ 166
  
ಹಿಮಾಚಲ ಪ್ರದೇಶ ಮೊದಲ ಇನ್ನಿಂಗ್ಸ್ 280
  
ಕರ್ನಾಟಕ ಎರಡನೇ ಇನ್ನಿಂಗ್ಸ್ 296
  
ಹಿಮಾಚಲ ಪ್ರದೇಶ ಎರಡನೇ ಇನ್ನಿಂಗ್ಸ್ 2 ವಿಕೆಟ್ ಗೆ 34

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT