ಅಖಿಲೇಶ್ ಯಾದವ್ 
ದೇಶ

ಬಡವರು, ಅಲ್ಪಸಂಖ್ಯಾತರ ವಿರುದ್ಧವಾಗಿ ಎನ್ ಪಿಆರ್, ಎನ್ ಆರ್ ಸಿ: ಫಾರಂ ಭರ್ತಿ ಮಾಡಲ್ಲ- ಅಖಿಲೇಶ್

ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ದೇಶದ ಬಡ ಜನರು ಹಾಗೂ ಅಲ್ಪಸಂಖ್ಯಾತರ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ತಾವು ಎನ್ ಪಿಆರ್ ಫಾರಂ ತುಂಬಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲಖನೌ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ದೇಶದ ಬಡ ಜನರು ಹಾಗೂ ಅಲ್ಪಸಂಖ್ಯಾತರ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ತಾವು ಎನ್ ಪಿಆರ್ ಫಾರಂ ತುಂಬಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ ಆರ್ ಸಿ ಅಥವಾ ಉದ್ಯೋಗದಲ್ಲಿ ಯಾವುದೇ ಪಡೆಯಬೇಕೆಂಬುದು ಪ್ರಶ್ನೆಯಾಗಿದೆ. ನಾನೇ ಮೊದಲ ವ್ಯಕ್ತಿಯಾಗಿ ಫಾರಂ ಭರ್ತಿ ಮಾಡಲ್ಲ, ನೀವು ನನ್ನಗೆ ಬೆಂಬಲ ಕೋರುತ್ತೀರಾ ಅಥವಾ ಕೋರುವುದಲ್ಲವೇ ?ನೀವು ಫಾರಂ ಭರ್ತಿ ಮಾಡುತ್ತೀರಾ ಅಥವಾ ಮಾಡಲ್ವ ಎಂದು ಪಕ್ಷದ ಯುವ ನಾಯಕರನ್ನು ಪ್ರಶ್ನಿಸಿದರು.

ಲಾಠಿಚಾರ್ಜ್ ಮಾಡುವ ಪೊಲೀಸರೇ ನಿಮ್ಮ ತಂದೆ ತಾಯಿ, ಪ್ರಮಾಣ ಪತ್ರಗಳನ್ನು ಕೂಡಾ ನೀಡಬೇಕಾಗುತ್ತದೆ. ದೇಶವನ್ನು ಉಳಿಸಲು ಎಲ್ಲಾ ಭಾರತೀಯರು ಮುಂದಾಗಬೇಕಾಗಿದೆ ಎಂದು ಅವರು ಕರೆ ನೀಡಿದರು.

ಸಿಎಎ ಮತ್ತು ಎನ್ ಆರ್ ಸಿ ಜಾರಿಯಾದರೆ  ದೇಶದಲ್ಲಿ ಆರ್ಥಿಕತೆ ಕ್ಷೀಣತೆ, ಮತ್ತಿತರ ಮೂಲ ಸಮಸ್ಯೆಗಳ ಬಗ್ಗೆ  ಸಾರ್ವಜನಿಕರು ಏನನ್ನು ಪ್ರಶ್ನೆ ಮಾಡದಂತಾಗುತ್ತದೆ.  ಐಸಿಯು ನಿಂದ ದೇಶದ ಆರ್ಥಿಕತೆ ಹೊರಬರಬೇಕಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT