ಸಾಂದರ್ಭಿಕ ಚಿತ್ರ 
ದೇಶ

ಯುಪಿ: ಸಿಎಎ ವಿರುದ್ಧದ ಪ್ರತಿಭಟನೆಯಿಂದ ಸಾರ್ವಜನಿಕ ಆಸ್ತಿಗೆ ಹಾನಿ, 59ಕ್ಕೂ ಹೆಚ್ಚು ಜನರಿಗೆ ನೋಟಿಸ್ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಆರೋಪಕ್ಕೆ  ಸಂಬಂಧಿಸಿದಂತೆ  ಉತ್ತರ ಪ್ರದೇಶದ ಸಂಬಲ್ ಜಿಲ್ಲಾಡಳಿತ 59ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಸಂಬಲ್ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಆರೋಪಕ್ಕೆ  ಸಂಬಂಧಿಸಿದಂತೆ  ಉತ್ತರ ಪ್ರದೇಶದ ಸಂಬಲ್ ಜಿಲ್ಲಾಡಳಿತ 59ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಪ್ರತಿಭಟನೆಯಿಂದಾದ ಸುಮಾರು 15. 35 ಲಕ್ಷ ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ 59 ಜನರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಮಲೇಶ್ ಅವಾಸ್ತಿ ಸ್ಪಷ್ಟಪಡಿಸಿದ್ದಾರೆ.

ನೋಟಿಸ್ ಕಳುಹಿಸಲಾಗಿದೆ. ಅವರು ಉತ್ತರಿಸಿಬೇಕಾಗಿದೆ.  ಪ್ರತಿಯೊಬ್ಬರಿಗೂ ಸಂಪೂರ್ಣ ವಿಚಾರಣೆಯ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂಸಾಚಾರದ ವೇಳೆಯಲ್ಲಿ ಬಸ್ ವೊಂದನ್ನು ಸುಟ್ಟುಹಾಕಲಾಗಿದೆ. ಸುಮಾರು 15. 25 ಲಕ್ಷದಷ್ಟು ಸಾರ್ವಜನಿಕ ಆಸ್ತಿ ಹಾನಿಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಡಿಯೋ ದೃಶ್ಯಾವಳಿಗಳು, ಸಿಸಿಟಿವಿ ಪೂಟೇಜ್ ಮತ್ತು ಛಾಯಾಚಿತ್ರಗಳ ಆಧಾರದ ಮೇಲೆ 59 ಜನರನ್ನು ಕಂಡುಹಿಡಿಯಲಾಗಿದೆ.  ಸರ್ಕಾರಿ ಆಸ್ತಿ ಹಾನಿಯನ್ನು ಅವರಿಂದ ಭರಿಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. 

ಡಿಸೆಂಬರ್ 19 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಿದ್ದರೂ ಅಮಾಯಕರಾಗಿರುವ ನನಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅಸಾನ್ ಅಬ್ದುಲ್ಲಾ , ಸೈಯದ್ ಮತ್ತಿತರರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT