ಮನೋಜ್ ಮುಕುಂದ್​ ನರಾವಣೆ 
ದೇಶ

ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ ಉಗ್ರರ ಕೃತ್ಯಗಳು ಕಡಿಮೆಯಾಗಿವೆ: ನೂತನ ಸೇನಾ ಮುಖ್ಯಸ್ಥ

ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿರುವ ನೂತನ ಸೇನಾ ಮುಖ್ಯಸ್ಥ ಜನರಲ್​ ಮನೋಜ್ ಮುಕುಂದ್​ ನರಾವಣೆ ಅವರು, ನೆರೆ ರಾಷ್ಟ್ರ ಭಯೋತ್ಪಾದನೆಯನ್ನೇ ರಾಜ್ಯ ನೀತಿಯನ್ನಾಗಿಸಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.

ನವದೆಹಲಿ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿರುವ ನೂತನ ಸೇನಾ ಮುಖ್ಯಸ್ಥ ಜನರಲ್​ ಮನೋಜ್ ಮುಕುಂದ್​ ನರಾವಣೆ ಅವರು, ನೆರೆ ರಾಷ್ಟ್ರ ಭಯೋತ್ಪಾದನೆಯನ್ನೇ ರಾಜ್ಯ ನೀತಿಯನ್ನಾಗಿಸಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.

ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ ಪಿಟಿಐಗೆ ಸಂದರ್ಶನ ನೀಡಿದ ಅವರು, ಭಯೋತ್ಪಾದನೆ ಎಂಬುದು ಈಗ ಜಾಗತಿಕ ಸಮಸ್ಯೆಯಾಗಿದೆ. ಇದರಿಂದ ಭಾರತವು ಹೊರತಾಗಿಲ್ಲ. ಈಗ ಪ್ರಪಂಚ ಮತ್ತು ಹಲವು ದೇಶಗಳು ಭಯೋತ್ಪಾದನೆ ಕರಿ ನೆರಳಿನ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.

ನಮ್ಮ ನೆರೆ ದೇಶ ಭಯೋತ್ಪಾದನೆಯನ್ನು ಬಳಸಿ ನಮ್ಮ ಮೇಲೆ ಯುದ್ಧ ಸಾರುತ್ತಿರುತ್ತದೆ. ನಾವು ಈ ಬಗ್ಗೆ ಶಾಂತಿ ಕಾಪಾಡಿಕೊಂಡಿದ್ದೇವೆ. ಆದರೆ ಆ ದೇಶಕ್ಕೆ ಉಳಿಗಾಲವಿಲ್ಲ. ಎಲ್ಲ ಸಮಯದಲ್ಲೂ ಎಲ್ಲರನ್ನು ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

370 ನೇ ವಿಧಿ ರದ್ದು ಮಾಡಿರುವುದರಿಂದ ಜಮ್ಮು ಕಾಶ್ಮೀರದ ಅಭಿವೃದ್ಧಿಯಾಗಲಿದೆ. ಈಗ ಅಲ್ಲಿ ಉಗ್ರರ ಕೃತ್ಯಗಳು ಕಡಿಮೆಯಾಗಿವೆ. ಇದರಿಂದ ಅಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ತರುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನರಾವಣೆ ಹೇಳಿದರು.

ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರು ಇಂದು ನಿವೃತ್ತರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಲೆ.ಜ.ಮನೋಜ್ ಅವರು ನೇಮಕಗೊಂಡಿದ್ದಾರೆ.

ಸೇನೆಯಲ್ಲಿ 37 ವರ್ಷ ಸೇವೆಯ ಅನುಭವ ಹೊಂದಿರುವ ಲೆ.ಜ.ಮನೋಜ್ ಈ ಅವಧಿಯಲ್ಲಿ ಚೀನಾ ಗಡಿ, ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಮಹತ್ವದ ಹುದ್ದೆ ನಿರ್ವಹಿಸಿದ್ದಾರೆ. ಇವರಿಗೆ ಈಗಾಗಲೇ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಠ ಸೇವಾ ಪದಕಗಳು ಸಂದಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT