ಭೂ ಸೇನಾ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಮುಕುಂದ್ ನರವಾಣೆ ಅಧಿಕಾರ ಸ್ವೀಕಾರ 
ದೇಶ

ಭೂ ಸೇನಾ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಮುಕುಂದ್ ನರವಾಣೆ ಅಧಿಕಾರ ಸ್ವೀಕಾರ

ಭಾರತೀಯ ಸೇನಾಪಡೆಯ ನೂತನ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಮುಕುಂದ್ ನರವಾಣೆಯವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. 

ನವದೆಹಲಿ: ಭಾರತೀಯ ಸೇನಾಪಡೆಯ ನೂತನ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಮುಕುಂದ್ ನರವಾಣೆಯವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. 

ಹಾಲಿ ಸೇನಾ ಮುಖ್ಯಸ್ಥ ಜ.ರಾವತ್ ಮಂಗಳವಾರ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಲೆ.ಜ.ಮನೋಜ್ ನೇಮಕಗೊಂಡಿದ್ದಾರೆ. 

ಸೇನೆಯಲ್ಲಿ 37 ವರ್ಷ ಸೇವೆಯ ಅನುಭವ ಹೊಂದಿರುವ ಲೆ.ಜ.ಮನೋಜ್ ಈ ಅವಧಿಯಲ್ಲಿ ಚೀನಾ ಗಡಿ, ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಮಹತ್ವದ ಹುದ್ದೆ ನಿರ್ವಹಿಸಿದ್ದಾರೆ. ಇವರಿಗೆ ಈಗಾಗಲೇ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಠ ಸೇವಾ ಪದಕಗಳು ಸಂದಿವೆ. 

ನರವಾಣೆಯವರು ಸೇನಾಯ ಉಪ ಮುಖ್ಯಸ್ಥರಾಗುವುದಕ್ಕೂ ಮುನ್ನ ಕೋಲ್ಕತಾದಲ್ಲಿ ಪ್ರಧಾನ ಕಚೇರಿಯಿರುವ ಭೂಸೇನೆಯ ಪೂರ್ವ ಕಮಾಂಡ್'ನ ಕಮಾಂಡರ್ ಆಗಿದ್ದರು. ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ವಿರುದ್ಧ ಕಾರ್ಯಾಚರಣೆಗಳ ತಂತ್ರದ ರೂವಾರಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT