ಸಾಂದರ್ಭಿಕ ಚಿತ್ರ 
ದೇಶ

ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯರ ಸಂಪೂರ್ಣ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಅಫಿಡವಿಟ್ಟು ಸಲ್ಲಿಕೆ 

ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಿಣಿಯರ ಸಂಪೂರ್ಣ ಹಕ್ಕು ಆಗುವುದಿಲ್ಲ. ತಾಯಿಯ ಆರೋಗ್ಯ ಮತ್ತು ಭ್ರೂಣದ ಸ್ಥಿತಿಗತಿ ಮೇಲೆ ಗರ್ಭಪಾತ ನಿರ್ಧರಿತವಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ಹೇಳಿದೆ.

ನವದೆಹಲಿ: ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಿಣಿಯರ ಸಂಪೂರ್ಣ ಹಕ್ಕು ಆಗುವುದಿಲ್ಲ. ತಾಯಿಯ ಆರೋಗ್ಯ ಮತ್ತು ಭ್ರೂಣದ ಸ್ಥಿತಿಗತಿ ಮೇಲೆ ಗರ್ಭಪಾತ ನಿರ್ಧರಿತವಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ಹೇಳಿದೆ.


ಗರ್ಭಪಾತವನ್ನು ನ್ಯಾಯಸಮ್ಮತಗೊಳಿಸಲು ನಿರ್ದೇಶನ ಕೋರಿ ಮೂವರು ಮಹಿಳೆಯರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ಟು ಸಲ್ಲಿಸಿದೆ.


1971ರ ವೈದ್ಯಕೀಯ ಗರ್ಭಪಾತ ಕಾಯ್ದೆ ಪ್ರಕಾರ, ಗರ್ಭಪಾತ ನಿರ್ದಿಷ್ಟ ಸಂದರ್ಭಗಳಲ್ಲಿ ಮಾಡಿಸಿಕೊಳ್ಳಬಹುದು. ಗರ್ಭಿಣಿಯರ ಜೀವಕ್ಕೆ ಅಪಾಯವಿದ್ದರೆ, ಆಕೆಯ ಶಾರೀರಿಕ ಅಥವಾ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವುದಿದ್ದರೆ ದಾಖಲಾತಿ ಮಾಡಿಕೊಂಡಿರುವ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಳ್ಳಬಹುದು. ಗರ್ಭಪಾತ ಕಾಯ್ದೆಯ ಸೆಕ್ಷನ್ 3 ಮತ್ತು 5ರಲ್ಲಿ ಮಹಿಳೆಯರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದ್ದು ಅದನ್ನು ತೆಗೆದುಹಾಕಬೇಕೆಂದು ಮೂವರು ಮಹಿಳೆಯರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


ಈ ಅರ್ಜಿಯನ್ನು ರದ್ದುಪಡಿಸುವಂತೆ ಕೋರಿರುವ ಕೇಂದ್ರ ಸಚಿವಾಲಯ, ಅಸುರಕ್ಷತೆಯ ಗರ್ಭಧಾರಣೆ ಸಂದರ್ಭದಲ್ಲಿ ಗರ್ಭಪಾತ ಮಾಡಿಸಿಕೊಳ್ಳುವುದನ್ನು ಕಾನೂನುಬದ್ಧಗೊಳಿಸಲು 1971ರ ಕಾಯ್ದೆ ಜಾರಿಗೆ ತರಲಾಗಿದ್ದು ಇದರಿಂದ ಶಿಶುಗಳ ಮತ್ತು ತಾಯಂದಿರ ಮರಣ ಪ್ರಮಾಣವನ್ನು ತಡೆಯಬಹುದು ಅಲ್ಲದೆ ಅನಾರೋಗ್ಯವನ್ನು ಸಹ ನಿಯಂತ್ರಿಸಬಹುದು ಎಂಬ ಉದ್ದೇಶ ಕಾಯ್ದೆಯಾಗಿದೆ ಎಂದು ಅಫಿಡವಿಟ್ಟಿನಲ್ಲಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT