ಅಖಿಲೇಶ್ ಯಾದವ್ 
ದೇಶ

ರಾಜ್ಯ ಅನುದಾನಿತ ಕೇಂದ್ರೀಯ ವೈದ್ಯಕೀಯ ಕಾಲೇಜಿನಲ್ಲಿ ಓಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿಗೆ ಅಖಿಲೇಶ್ ಒತ್ತಾಯ

ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜುಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಲಖನೌ: ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜುಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿರುವ ಅಖಿಲೇಶ್ ಯಾದವ್,  ದೇಶದಲ್ಲಿ 25 ಸಾವಿರ ಎಂಬಿಬಿಎಸ್ ಸೀಟುಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನೀಟ್ ಪರೀಕ್ಷೆ ನಡೆಸಲಾಗುತ್ತದೆ. ಈ ಅಂಕಗಳ ಆಧಾರದ ಮೇಲೆ  ಪಟ್ಟಿ ತಯಾರಿಸಲಾಗುತ್ತದೆ. ಇದರಲ್ಲಿ   ರಾಜ್ಯ ವೈದ್ಯಕೀಯ ಕಾಲೇಜುಗಳಿಗೆ ಇಡುವ ಶೇ, 85 ರಷ್ಟು ಸೀಟುಗಳಲ್ಲಿ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ.

ಇನ್ನು ಉಳಿಯುವ ಶೇ, 15 ರಷ್ಟು ಸೀಟುಗಳನ್ನು  ಕೇಂದ್ರೀಯ ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವ ಕಾಲೇಜುಗಳಲ್ಲಿ 4/1 ರಷ್ಟು ಸೀಟುಗಳಲ್ಲಿ  ಹಿಂದುಳಿದ ವರ್ಗಗಳಿಗೆ ಮೀಸಲಾತಿ ಅನ್ವಯವಾಗುತ್ತದೆ. ಆದರೆ, 3/4 ರಷ್ಟು ಸೀಟುಗಳನ್ನು ಇಟ್ಟಿರುವ ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜಿನಲ್ಲಿ  ಹಿಂದುಳಿದ ವರ್ಗಗಳು ಮೀಸಲಾತಿ ನೀಡುತ್ತಿಲ್ಲ ಎಂದು ಯಾದವ್ ಹೇಳಿದ್ದಾರೆ.

ಈ ಕಾರಣದಿಂದಾಗಿ ಪ್ರತಿವರ್ಷ 700 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೀಸಲಾತಿ ಸೌಲಭ್ಯ ಪಡೆಯುತ್ತಿಲ್ಲ. ಈ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸುವಂತೆ ಸಚಿವ ಜಾವಡೇಕರ್ ಅವರನ್ನು  ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: ಡಿಎಂಕೆಗೆ 'SIR'ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ, ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರಿತಿಕ್ರಿಯೆ ಏನು?

SCROLL FOR NEXT