ಸಂಗ್ರಹ ಚಿತ್ರ 
ದೇಶ

ಭೀಮಾ ಕೋರೆಗಾಂವ್ ಪ್ರಕರಣ: ಪುಣೆ ಪೊಲೀಸರಿಂದ ಮತ್ತೊಬ್ಬ ಹೋರಾಟಗಾರನ ಬಂಧನ

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮತ್ತೋರ್ವ ಹೋರಾಟಗಾರರನ್ನು ಬಂಧಿಸಿದ್ದು, ಇಂದು ಮುಂಜಾನೆ ಖ್ಯಾತ ದಲಿತಪರ ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರನ್ನು ಬಂಧಿಸಿದ್ದಾರೆ.

ಪುಣೆ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮತ್ತೋರ್ವ ಹೋರಾಟಗಾರರನ್ನು ಬಂಧಿಸಿದ್ದು, ಇಂದು ಮುಂಜಾನೆ ಖ್ಯಾತ ದಲಿತಪರ ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರನ್ನು ಬಂಧಿಸಿದ್ದಾರೆ.
ಪುಣೆಯಲ್ಲಿನ ಅವರ ನಿವಾಸದಿಂದಲೇ ಆನಂದ್ ತೆಲ್ತುಂಬೆಡ್ ಅವರನ್ನು ಬಂಧಿಸಲಾಗಿದ್ದು, ಇಂದು ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ. ಇನ್ನು ಇತ್ತೀಚೆಗಷ್ಟೇ ಪುಣೆ ನ್ಯಾಯಾಲಯ ಆನಂದ್ ತೆಲ್ತುಂಬೆಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. 
ಪುಣೆ ಪೊಲೀಸ್ ಮೂಲಗಳು ತಿಳಿಸಿರುವಂತೆ ಭೀಮಾ ಕೋರೆಗಾಂವ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೂ ಸಲ್ಲಿಕೆ ಮಾಡಿದ್ದು, ಇದೇ ಕಾರಣಕ್ಕೆ ಪುಣೆ ನ್ಯಾಯಾಲಯ ಆನಂದ್ ತೆಲ್ತುಂಬೆಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.
2017ರ ಡಿಸೆಂಬರ್ 31ರಂದು ಎಲ್ಗಾರ್ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಲಿತಪರ ಹೋರಾಟಗಾರರು ಮಾಡಿದ್ದ ಪ್ರಚೋದನಾಕಾರಿ ಭಾಷಣದಿಂದಲೇ ಹಿಂಸಾಚಾರ ಭುಗಿಲೆದ್ದಿತ್ತು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಈ ಕುರಿತು ಸಂಪೂರ್ಣ ಆರೋಪ ಪಟ್ಟಿಯನ್ನು ಪೊಲೀಸ್ ಅಧಿಕಾರಿಗಳು ಪುಣೆ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ ಆನಂದ್ ತೆಲ್ತುಂಬೆಡ್ ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತರೆ 7 ಮಂದಿ ಹೋರಾಟಗಾರರ ಹೆಸರನ್ನು ಅಧಿಕಾರಿಗಳು ಆರೋಪ ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂದು ತಿಳಿದುಬಂದಿದೆ. 
ಆನಂದ್ ತೆಲ್ತುಂಬೆಡ್  ಬಂಧನಕ್ಕೂ ಮುನ್ನ ಪೊಲೀಸರು ಇತರೆ ಆರೋಪಿಗಳಾದ ಸುಧಾ ಭಾರಧ್ವಾಜ್, ಪಿ ವರವರ ರಾವ್, ವೆರ್ನಾನ್ ಗೊನ್ಜಾಳ್ವಾಸ್ ಮತ್ತು ಅರುಣ್ ಪರೇರ ಅವರನ್ನು ಬಂಧಿಸಿದ್ದರು. ಅಂತೆಯೇ ಪ್ರಕರಣದ ಮತ್ತೋರ್ವ ಆರೋಪಿ ಹಾಗೂ ಹೋರಾಟಗಾರ ಗೌತಮ್ ನವಲಖ ಅವರನ್ನೂ ಪೊಲೀಸರು ಬಂಧಿಸಲು ಯತ್ನಿಸಿದ್ದರು. ಆದರೆ ದೆಹಲಿ ನ್ಯಾಯಾಲಯ ಅವರ ಬಂಧನಕ್ಕೆ ತಡೆ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT