ದೇಶ

ಹಣ ವರ್ಗಾವಣೆ ಪ್ರಕರಣ : ಫೆ.16ರವರೆಗೂ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ಮಂಜೂರು

Nagaraja AB

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ  ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 6 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ  ವಿಶೇಷ ನ್ಯಾಯಾಧೀಶ  ಅರವಿಂದ್ ಕುಮಾರ್ ,  ರಾಬರ್ಟ್ ವಾದ್ರಾ ಅವರಿಗೆ ಆದೇಶಿಸಿದ್ದಾರೆ.

ಲಂಡನ್ ನ ಬ್ರೈಯಾನ್ ಸ್ಟಾನ್ ಸ್ಕ್ವೇರ್ ನಲ್ಲಿ  ಸುಮಾರು 1.9 ಮಿಲಿಯನ್ ಪೌಂಡ್ ವೆಚ್ಚದಲ್ಲಿ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ವಿರುದ್ಧ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ  ಜಾರಿ ನಿರ್ದೇಶನಾಲಯವೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಾವಾ ಆಗಿರುವ ರಾಬರ್ಟ್ ವಾದ್ರಾ ವಿರುದ್ಧ  ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ.

SCROLL FOR NEXT