ಬಿಹಾರ: ಲಾಠಿ ಚಾರ್ಜ್ ವೇಳೆ ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ 
ದೇಶ

ಬಿಹಾರ: ಲಾಠಿ ಚಾರ್ಜ್ ವೇಳೆ ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ

ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಮಾಜಿ ಕೇಂದ್ರ ಸಚಿವ ಕುಶ್ವಾಹ ಹಾಗೂ ಅವರ ಪಕ್ಷ ಆರ್ ಎಲ್ಎಸ್ ಪಿ ಕಾರ್ಯಕರ್ತರಿಗೆ ಗಾಯಗಳುಂಟಾಗಿರುವ ಘಟನೆ ಬಿಹಾರ ರಾಜಧಾನಿ

ಪಾಟ್ನಾ: ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಮಾಜಿ ಕೇಂದ್ರ ಸಚಿವ ಕುಶ್ವಾಹ ಹಾಗೂ ಅವರ ಪಕ್ಷ ಆರ್ ಎಲ್ಎಸ್ ಪಿ ಕಾರ್ಯಕರ್ತರಿಗೆ  ಗಾಯಗಳುಂಟಾಗಿರುವ ಘಟನೆ ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ. 
ಬಿಹಾರದಲ್ಲಿ ಶಾಲೆ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಆರ್ ಎಲ್ಎಸ್ ಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಆರ್ ಎಲ್ಎಸ್ ಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. 
ಲಾಠಿ ಚಾರ್ಜ್ ನಲ್ಲಿ ಕುಶ್ವಾಹ ಅವರ ತಲೆ ಹಾಗೂ ಕಲುಗಳಿಗೆ ತೀವ್ರವಾದ ಗಾಯಗಳುಂಟಾಗಿ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಪಕ್ಷದ ವಕ್ತಾರ ಮಾಧವ್ ಆನಂದ್ ಹೇಳಿಕೆ ನೀಡಿದ್ದಾರೆ. 
ಪ್ರತಿಭಟನೆ ವೇಳೆ ಪೊಲೀಸರು ಕುಶ್ವಾಹ ಅವರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ ಎಂದು ಸೂಕ್ತ ಭದ್ರತೆ ಒದಗಿಸದ ಸಿಎಂ ನಿತೀಶ್ ಕುಮಾರ್ ವಿರುದ್ಧ ಪಕ್ಷದ ವಕ್ತಾರ ಮಾಧವ್ ಆನಂದ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT