ಬಂಗಾಳವನ್ನೇ ನಾಶ ಮಾಡಲು ಬಿಜೆಪಿ ಸಜ್ಜು: ಮಮತಾ ಬ್ಯಾನರ್ಜಿಆರೋಪ 
ದೇಶ

ಬಂಗಾಳವನ್ನೇ ನಾಶ ಮಾಡಲು ಬಿಜೆಪಿ ಸಜ್ಜು: ಮಮತಾ ಬ್ಯಾನರ್ಜಿಆರೋಪ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತಾ ಪೋಲಿಸ್ ಕಮಿಷನರ್ ನಿವಾಸದ ಹೊರಗಡೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದು "ಬಿಜೆಪಿ....

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತಾ ಪೋಲಿಸ್ ಕಮಿಷನರ್ ನಿವಾಸದ ಹೊರಗಡೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದು "ಬಿಜೆಪಿ (ಭಾರತೀಯ ಜನತಾ ಪಕ್ಷ) ಬಂಗಾಳವನ್ನು ಹಾಳು ಮಾಡಲು ಹೊರಟಿದೆ. ನಾನು ಬ್ರಿಗೇಡ್ ರ್ಯಾಲಿಗೆ ಅವಕಾಶ ನೀಡಿಲ್ಲ ಎಂಬ ಏಕೈಕ ಕಾರಣಕ್ಕೆ ಅವರು ಬಂಗಾಳವನ್ನೇ ನಾಶ ಮಾಡಲು ಹೊರಟಿದ್ದಾರೆ." ಎಂದರು.
ಪ್ರಧಾನಿ ಮೋದಿಯವರ ನಿನ್ನೆಯ ಭಾಷಣವನ್ನು ನೀವೇಲ್ಲಾ ಕೇಳಿದ್ದೀರಿ. ಅದರಲ್ಲಿ ಅವರು ಹಾಕಿರುವ ಬೆದರಿಕೆಗಳ ಕುರಿತೂ ನಿಮಗೆ ಅರಿವಿದೆ. ಪ್ರಧಾನಿ ಆಡಿರುವ ಭಾಷೆಯ ಕುರಿತಂತೆ ನಾನೇನೂ ಹೇಳುವ ಅಗತ್ಯವಿಲ್ಲ ಎಂದ ಟಿಎಂಸಿ ನಾಯಕಿ ಬಿಜೆಪಿ ಇದಾಗಲೇ ತನ್ನ ಎಕ್ಸ್ಪೈರಿ ದಿನಾಂಕದ ಆಚೆಗೆ ಹೋಗಿದೆ ಎಂದಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮೋದಿ ಅವರ ಆದೇಶದ ಅನುಸಾರ ಕಾರ್ಯನಿರ್ವಹಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆರೋಪಿಸಿದ್ದಾರೆ. ಕೇಂದ್ರೀಯ ತನಿಖಾ ದಳವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದೂ  ಅವರು ಹೇಳಿದರು.
ನಾವು ಪೋಲೀಸ್ ಬಲಕ್ಕೆ ರಕ್ಷಣೆ ನೀಡಬೇಕಾಗಿರುವುದು ನಮ್ಮ ಜವಾಬ್ದಾರಿ. ನೋಟೀಸ್ ನೀಡದೆ ನೀವು ಕೊಲ್ಕತ್ತಾ ಪೊಲೀಸ್ ಆಯುಕ್ತರ ಮನೆಗೆ ಬರುತ್ತಿದ್ದೀರಿ. ನಾವು ಸಿಬೈಐ ನವರನ್ನು ಬಂಧಿಸಬಹುದು, ಆದರೆ ಇದಿಘ ಬಿಟ್ಟಿದ್ದೇವೆ.
ರಾಜೀವ್ ಕುಮಾರ್ (ಕೊಲ್ಕತ್ತಾ ಪೋಲಿಸ್ ಕಮೀಷನರ್) ಅವರು ವಿಶ್ವದಲ್ಲೇ ಅತ್ಯುತ್ತಮ ಅಧಿಕಾರಿ ಎಂದು ನಾನು ಭಾವಿಸುತ್ತೇನೆ. ನಾನು ಸಿಬಿಐ ಅಧಿಕಾರಿಗಳ ಬಗ್ಗೆ ಗೌರವ ಹೊಂದಿದ್ದೇನೆ. ಆದರೆ ಇಂದು ನಾನು ಬಹಳ ದುಃಖಿತಳಾಗಿದ್ದೇನೆ.ಒದು ಒಕ್ಕೂಟ ವ್ಯವಸ್ಥೆಯ ನಾಶಕ್ಕೆ ಕಾರಣವಾಗಲಿದೆ" ,ಮಮತಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT