ರಾಹುಲ್ ಗಾಂಧಿ-ಆಶಾ ಪಟೇಲ್ 
ದೇಶ

ನೀವು ಜಾತಿಗಳ ನಡುವೆ ವೈರತ್ವ ಬಿತ್ತುತ್ತಿದ್ದೀರ?; ರಾಹುಲ್‌ಗೆ ಪತ್ರ ಬರೆದು ಕಾಂಗ್ರೆಸ್ ತೊರೆದ ಶಾಸಕಿ!

ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ವೈರತ್ವ ತರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ತರುವ ಮೂಲಕ ಜಾತಿಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಹೇಳಿ...

ಅಹಮದಾಬಾದ್: ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ವೈರತ್ವ ತರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ತರುವ ಮೂಲಕ ಜಾತಿಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಹೇಳಿ ಗುಜರಾತ್ ನ ಕಾಂಗ್ರೆಸ್ ಶಾಸಕಿ ಆಶಾ ಪಟೇಲ್ ಶಾಸಕಿ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 
ಕಾಂಗ್ರೆಸ್ ಪಕ್ಷದೊಳಗಿನ ಗುಂಪುಗಾರಿಕೆ ಹಾಗೂ ಒಳಜಗಳದಿಂದ ಬೇಸತ್ತು ತಾವು ಪಕ್ಷಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಆಶಾ ಪಟೇಲ್ ಹೇಳಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. 
ಪತ್ರದಲ್ಲಿ ಪ್ರಧಾನಿ ಮೋದಿ ಅವರು ಮೇಲ್ಜಾತಿ ಬಡವರಿಗೆ ಶೇಖಡ 10ರಷ್ಟು ಮೀಸಲಾತಿ ನೀಡಿದರೆ. ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ವೈರತ್ವ ತರುತ್ತಿದೆ ಎಂದು ಪತ್ರದಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. 
ಆಶಾ ಪಟೇಲ್ ಅವರು ಮೆಹ್ಸಾನಾ ಜಿಲ್ಲೆಯ ಉಂಝಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಮೋದಿ ಅವರ ಹುಟ್ಟೂರಾದ ವಡನಗರವು ಇದೇ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. 2017ರಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಿತ್ತು.
ಶನಿವಾರ ರಾಜ್ಯಪಾಲರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದು ರಾಜ್ಯಪಾಲರು ರಾಜಿನಾಮೆಯನ್ನು ಅಂಗೀಕರಿಸಿದ್ದು ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

'BJP, ECಯಿಂದ ಬಹಿರಂಗವಾಗಿಯೇ ಮತಗಳ್ಳತನ': ಒಬ್ಬ ವ್ಯಕ್ತಿಯಿಂದ ಹಲವು ಕಡೆ ಮತದಾನ; ಪೋಸ್ಟ್ ಹಂಚಿಕೊಂಡ ರಾಹುಲ್

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆದರೆ ತಪ್ಪೇನು?- DK Shivakumar; ಸಿಎಂ ಹುದ್ದೆ ಕನಸು ಕೈಬಿಟ್ಟ DCM?

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

SCROLL FOR NEXT