ಪ್ರಕಾಶ್ ಜಾವಡೇಕರ್ 
ದೇಶ

ಮಮತಾ ಬ್ಯಾನರ್ಜಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಪ್ರಕಾಶ್ ಜಾವಡೇಕರ್

ಮಮತಾ ಬ್ಯಾನರ್ಜಿ ವರ್ಸಸ್ ಸಿಬಿಐನಿಂದಾಗಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ನವದೆಹಲಿ: ಮಮತಾ ಬ್ಯಾನರ್ಜಿ ವರ್ಸಸ್ ಸಿಬಿಐನಿಂದಾಗಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ಪ್ರತಿಪಕ್ಷಗಳೂ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡುತ್ತಿವೆ. ಈ ಜನರು ಯಾರು? ಅವರೆಲ್ಲಾ ಜಾಮೀನಿನ ಮೇಲೆ ಹೊರಗಡೆ ಇರುವವರು. ಅಂತಹವರೆಲ್ಲಾ ಮಮತಾ ಬ್ಯಾನರ್ಜಿ ಜೊತೆಗೆ ಕೈ  ಜೋಡಿಸಿದ್ದಾರೆ. ಇದು ಮಹಾಘಟಬಂಧನ್ ಅಲ್ಲ, ಭ್ರಷ್ಟಾಚಾರಕ್ಕಾಗಿ  ಅವರೆಲ್ಲಾ ಒಂದುಗೂಡಿದ್ದಾರೆ. ಭ್ರಷ್ಟರು  ಒಟ್ಟಿಗೆ ನಿಂತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಕೊಲ್ಕತ್ತಾದಲ್ಲಿ ಏನು ಸಂಭವಿಸಿದೆ ಅದು ಪ್ರಜಾಪ್ರಭುತ್ವ ವ್ಯವಸ್ಥೆ ಹರಣ ಮಾಡಿದಂತಾಗಿದೆ ಎಂದು ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ಈ ಮಧ್ಯೆ ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಶರದಾ ಚಿಟ್ ಫಂಡ್ ಪ್ರಕರಣದಲ್ಲಿ ಅನೇಕ ರಾಜಕಾರಣಿಗಳು, ಪ್ರಭಾವಿಗಳು ತೊಡಗಿಸಿಕೊಂಡಿರುವ ಬಗ್ಗೆ  ಸಿಬಿಐ ತನಿಖೆಯಿಂದ ತಿಳಿದುಬಂದಿದೆ.  ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ,  ಅಲ್ಲಿನ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ  ನೋಟಿಸ್ ಜಾರಿ ಮಾಡಿದ್ದು, ಪರಿಸ್ಥಿತಿ ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ  ಆಡಳಿತ ವ್ಯವಸ್ಥೆ ಕುಸಿದು ಬಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಗೆ ತರುವುದು ಸೂಕ್ತ ಎಂದು ಕೇಂದ್ರ ಉಕ್ಕು ಸಚಿವ ಬೀರೇಂದ್ರ ಸಿಂಗ್ ಚೌದರಿ ಹೇಳಿದ್ದಾರೆ.
ಈ ಮಧ್ಯೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.ಹಾಗಾಗೀ ಹೀಗೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT