ರಿಷಿ ಕುಮಾರ್ ಶುಕ್ಲಾ, ಮಮತಾ ಬ್ಯಾನರ್ಜಿ 
ದೇಶ

ರಿಷಿ ಕುಮಾರ್ ಶುಕ್ಲಾ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ ಬೆನ್ನಲ್ಲೇ ದೀದಿ ಜೊತೆ ಸಂಘರ್ಷ!

ನೂತನ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿದ್ದು ಅಧಿಕಾರ...

ನೂತನ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿದ್ದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಸಂಘರ್ಷ ಎದುರಾಗಿದೆ. 
ಶಾರದಾ ಚಿಟ್ ಫಂಡ್ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ತೆರಳಿದ್ದ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳನ್ನೇ ಕೊಲ್ಕತ್ತಾ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು. ಸದ್ಯ ಪಶ್ಚಿಮ ಬಂಗಾಳದಲ್ಲಿ ಸಿಬಿಐ ವರ್ಸಸ್ ಕೋಲ್ಕತ್ತಾ ಪೊಲೀಸರು ಎಂದಾಗಿದ್ದು ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಳೆದ ರಾತ್ರಿಯಿಂದ ಧರಣಿ ನಡೆಸುತ್ತಿದ್ದಾರೆ. 
ಸಿಬಿಐ ಅಧಿಕಾರಿಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದ ಕ್ರಮದ ಕುರಿತು ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು ವಿಚಾರಣೆ ನಡೆಸುತ್ತಿದೆ. 
ಇನ್ನು ಸಿಬಿಐನ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಮಮತಾ ಬ್ಯಾನರ್ಜಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT