ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದಲ್ಲಿ ಉಂಟಾಗಿರುವ ಹೈಡ್ರಾಮಾ ಸಂಬಂಧ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿದ್ದು, ಈ ಹಿಂದೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಮತಾ ವಿರುದ್ಧ ಮಾಡಲಾಗಿದ್ದ ಟ್ವೀಟ್ ಗಳನ್ನು ಬಿಜೆಪಿ ಟ್ವೀಟ್ ಮಾಡಿದೆ.
ಇಂದು ಬೆಳಗ್ಗೆ ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತ ಟ್ವೀಟ್ ಮಾಡಿದ್ದು, 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಹುಶಃ ಮರೆಯುವ ಸಮಸ್ಯೆ ಇರಬೇಕು ಎಂದೆನಿಸುತ್ತದೆ. ಅವರು ಈ ಹಿಂದೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಅಲ್ಲಿ ತಾವೇ ಆಡಿದ್ದ ಮಾತುಗಳನ್ನು ಮರೆತಿದ್ದಾರೆ ಎಂದೆನಿಸುತ್ತಿದೆ. ರಾಹುಲ್ ಗಾಂಧಿ ಅವರೇ ಶೀಘ್ರ ಚೇತರಿಸಿಕೊಂಡು ಗುಣಮುಖರಾಗಿ ಬನ್ನಿ ಎಂದು ಬಿಜೆಪಿ ರಾಹುಲ್ ಗಾಂಧಿ ಕಾಲೆಳೆದಿದೆ.
ಅಲ್ಲದೆ ಈ ಹಿಂದೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಇದೇ ಶರದಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತು ಮಮತಾ ಸರ್ಕಾರದ ವಿರುದ್ಧ ಮಾಡಿದ್ದ ಸರಣಿ ಆರೋಪಗಳ ಟ್ವೀಟ್ ಗಳ ಚಿತ್ರವನ್ನು ಬಿಜೆಪಿ ಟ್ವಿಟರ್ ಗೆ ಅಪ್ಲೋಡ್ ಮಾಡಿದೆ. ಬಿಜೆಪಿ ಪಕ್ಷದ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos