ಧರಣಿ ನಿರತ ಮಮತಾ ಬ್ಯಾನರ್ಜಿ 
ದೇಶ

ಸಿಬಿಐ-ಬಂಗಾಳ ಪೊಲೀಸ್ ಹೈಡ್ರಾಮ; ಕೇಂದ್ರ ಸರ್ಕಾರದ ವಿರುದ್ಧ ಧರಣಿ ಕುಳಿತ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ  ಹಗರಣದ ವಿಚಾರಣೆ ನಡೆಸಲು ಕೊಲ್ಕತಾ ಪೊಲೀಸ್​ ಕಮಿಷನರ್ ರಾಜೀವ್​ ಕುಮಾರ್​ ಮನೆಗೆ ಸಿಬಿಐ ಅಧಿಕಾರಿಗಳು ಮುತ್ತಿಗೆ ಹಾಕಿದ ಪ್ರಕರಣ ಇದೀಗ ರಾಜಕೀಯ ತಿರುವು ಪಡೆಯುತ್ತಿದ್ದು, ತಮ್ಮ ಗಮನಕ್ಕೆ ತಾರದೆ ಪೊಲೀಸ್​ ಕಮಿಷನರ್​ ಅವರನ್ನು ವಿಚಾರಣೆ ನಡೆಸಲು ಬಂದಿದ್ದ ಸಿಬಿಐ ನಡೆಯ ಬಗ್ಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೆಯೇ ಕೇಂದ್ರ ಸರ್ಕಾರದ ನಡೆ ವಿರುದ್ಧ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷದ ಕೆಲ ಹಿರಿಯ ಸಚಿವ ಮತ್ತು ಶಾಸಕರು ಅಹೋರಾತ್ರಿ  ಧರಣಿ ನಡೆಸುತ್ತಿದ್ದಾರೆ.
ಇನ್ನು ಇಂದಿನಿಂದ ಪಶ್ಚಿಮ ಬಂಗಾಳದ ಕಲಾಪ ಆರಂಭವಾಗಲಿದ್ದು, ಧರಣಿಯ ಸ್ಥಳದಲ್ಲೇ ಅಧಿವೇಶನ ನಡೆಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ದೇಶದ ಸ್ಥಿತಿ ತುರ್ತುಸ್ಥಿತಿ ಸಂದರ್ಭಕ್ಕಿಂತ ಕಡೆಯಾಗಿದೆ ಎಂದು ಕೇಂದ್ರ ಸರ್ಕಾರದ ಮೇಲೆ ಮಮತಾ ವಾಗ್ದಾಳಿ ನಡೆಸಿದ್ದಾರೆ. ಹಾಗೇ, ನಮ್ಮ ರಾಜ್ಯದವರಿಗೆ ರಕ್ಷಣೆ ನೀಡುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ. ನಮ್ಮ ಗಮನಕ್ಕೆ ತಾರದೆ ಹೇಗೆ ನೀವು ನಮ್ಮ ರಾಜ್ಯದ ಅಧಿಕಾರಿಗಳ ಮೇಲೆ ಮುತ್ತಿಗೆ ಹಾಕಿದಿರಿ? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT