ಸಂಗ್ರಹ ಚಿತ್ರ 
ದೇಶ

ಕೆಲಸ ಮಾಡಿದರೆ ರಾಜಕೀಯ ಷಡ್ಯಂತ್ರ, ಕೆಲಸ ಮಾಡದಿದ್ದರೆ ಪಂಜರದ ಗಿಳಿ: ನಿರ್ಮಲಾ ಸೀತಾರಾಮನ್ ವ್ಯಂಗ್ಯ

ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರವಾಗಿ ವಿರೋಧಿಸಿದ್ದಾರೆ.

ನವದೆಹಲಿ: ಸಿಬಿಐ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರವಾಗಿ ವಿರೋಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಬಿಐ ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಅವರ ಕರ್ತವ್ಯಕ್ಕೆ ಯಾರೂ ಅಡ್ಡಿಯಾಗಬಾರದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇದೇ ವೇಳೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ಪರವಾಗಿ ನಿಂತ ರಾಜಕೀಯ ಮುಖಂಡರ ವಿರುದ್ಧ ಕಿಡಿಕಾರಿದ ನಿರ್ಮಲಾ, ಸಿಬಿಐ ತನ್ನ ಕೆಲಸ ಮಾಡಬೇಕೇ ಬೇಡವೇ ಎಂದು ಪ್ರಶ್ನಿಸಿದರು. ಅಂತೆಯೇ ಸಿಬಿಐ ಕೆಲಸ ಮಾಡಲಿಲ್ಲ ಎಂದರೆ ಅದು ಪಂಜರದ ಗಿಳಿ.. ಕೇಂದ್ರ ಸರ್ಕಾರ ಅದರ ರೆಕ್ಕೆ ಪುಕ್ಕ ಕತ್ತರಿಸಿ ಹಾಕಿದೆ ಎಂದು ಬೊಬ್ಬಿಡುತ್ತಾರೆ. ಅದು ಅದರ ಪಾಡಿಗೆ ಕೆಲಸ ಮಾಡಿದರೆ ಷಡ್ಯಂತ್ರ ಎಂದು ಆರೋಪಿಸುತ್ತಾರೆ. ಮೊದಲು ನಿಮ್ಮ ಮನಃಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳಿ ಎಂದು ನಿರ್ಮಲಾ ಕಿಡಿಕಾರಿದ್ದಾರೆ.
ಅಂತೆಯೇ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಲಿದ್ದು, ತಮ್ಮ ಸಿಎಂ ಯೋಗಿ ಆದಿತ್ಯಾನಾಥ್ ಅವರ ರ್ಯಾಲಿಗೆ ಪಶ್ಚಿಮಬಂಗಾಳ ಅವಕಾಶ ನೀಡದೇ ಇರುವುದು ಅಕ್ಷಮ್ಯ. ಇದು ಸಂವಿಧಾನ ವಿರೋಧಿತನವಲ್ಲವೇ..? ಯೋಗಿ ಆದಿತ್ಯಾನಾಥ್ ಬಂದರೆ ತಮ್ಮ ಗೆಲುವು ಕಷ್ಟಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಮತ್ತು ಟಿಎಂಸಿಗೆ ಭಯವೇ.. ನಿಮ್ಮ ನೆಲದಲ್ಲಿ ನಿಮಗೇ ಅಭದ್ರತೆ ಕಾಡುತ್ತಿದೆಯೇ ಎಂದು ನಿರ್ಮಲಾ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT