ಸಾಂದರ್ಭಿಕ ಚಿತ್ರ 
ದೇಶ

ಎತ್ತರದ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಸ್ವದೇಶಿ ನಿರ್ಮಿತ ಸಮವಸ್ತ್ರ: ಸೇನೆ

ಎತ್ತರದ ಪರ್ವತ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಚಳಿ, ಗಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ಉಡುಪು ಹಾಗೂ ಇನ್ನಿತರ ಸಲಕರಣೆಗಳನ್ನು ಭಾರತೀಯ ಸೇನೆ ಖರೀದಿಸುತ್ತಿದೆ.

ನವದೆಹಲಿ: ಎತ್ತರದ ಪರ್ವತ ಪ್ರದೇಶಗಳಲ್ಲಿ  ದೇಶ ಕಾಯುವ ಯೋಧರಿಗೆ ಚಳಿ, ಗಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ಉಡುಪು ಹಾಗೂ ಇನ್ನಿತರ ಸಲಕರಣೆಗಳನ್ನು ಭಾರತೀಯ ಸೇನೆ ಖರೀದಿಸುತ್ತಿದೆ.

ವಿವಿಧ ಕಡೆಗಳಲ್ಲಿನ ಎತ್ತರದ ಪ್ರದೇಶಗಳಲ್ಲಿ ಸುಮಾರು 40 ಸಾವಿರ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅವರ ಉಡುಪಿಗಾಗಿ ಪ್ರತಿ ಆರು ವರ್ಷಕ್ಕೊಮ್ಮೆ ತಗಲುತ್ತಿದ್ದ 2.5 ಕೋಟಿ ಆಮದು ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಸ್ಥಳೀಯ ತಯಾರಕರನ್ನು ಆಯ್ಕೆಮಾಡುವ ಪ್ರಸ್ತಾವನ್ನು ಸೇನೆ ಪ್ರಾರಂಭಿಸಿದೆ.

ಎತ್ತರದ ಪ್ರದೇಶಗಳಲ್ಲಿ 10 ಡಿ ಸೆಲ್ಸಿಯಸ್ ಗಿಂತಲೂ ಕಡಿಮೆ ಉಷ್ಠಾಂಶದಲ್ಲಿ ಸೈನಿಕರು ಸೇವೆ ಸಲ್ಲಿಸುತ್ತಾರೆ. ಅಂತಹ ವಾತಾವರಣಕ್ಕನುಗುಣವಾಗಿ ಹಗುರವಾದ ಬಟ್ಟೆಗಳ ಅಗತ್ಯವಿದೆ. ಪ್ರತಿ ಆರು ತಿಂಗಳಿಗೊಮ್ಮೆ ಸೇನೆಗಾಗಿ ಉಡುಪು ಹಾಗೂ ಮತ್ತಿತರ ಸಲಕರಣೆಗಳನ್ನು ಬದಲಾಯಿಸಲಾಗುತ್ತದೆ.

ಹವಾಮಾನ ಪರಿಸ್ಥಿತಿ ಹಾಗೂ ಸೈನಿಕರ ದೈಹಿಕ ಆರೋಗ್ಯ ರಕ್ಷಣೆಗಾಗಿ ಸೂಕ್ತ ಮಾರ್ಗದರ್ಶನ ರೂಪಿಸಲಾಗಿದೆ ಎಂದು ಹೇಳುವ ಸೇನಾ ಅಧಿಕಾರಿ, ಕ್ಯಾರಾಬಿನರ್ಸ್, ರಾಕ್ ಪಿಚೊನ್ಸ್, ಸಮ್ಮರ್ ಸೂಟ್, ಮತ್ತಿತರ ಉತ್ಪನ್ನಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಎಂಟು ಉತ್ಪನ್ನಗಳ ಪ್ರಾಯೋಗಿಕ ಪರೀಕ್ಷೆ ನಡೆಸಿ, ಎರಡನ್ನು ಸೇನೆಯ ಸಭೆಯಲ್ಲಿ ಗುರುತಿಸಲಾಗಿತ್ತು, ನಂತರ ಡಿಸೆಂಬರ್ 2018ರಲ್ಲಿ ಮತ್ತೊಂದು ಸಭೆ ನಡೆಸಿ,  ಬಿಡ್ ಕರೆದಿದ್ದು, ಹೊಸ ತಂತ್ರಜ್ಞಾನವನ್ನು ನೋಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸೇನೆ ಈಗ ಸ್ವಿಟ್ಜರ್‌ಲ್ಯಾಂಡ್ ನಿಂದ ವಿಶೇಷವಾದ  ಗೇರ್ ಸೇರಿದಂತೆ ನಾರ್ವೇ, ಪಿನ್ ಲ್ಯಾಂಡ್ ಮತ್ತಿತರ ರಾಷ್ಟ್ರಗಳಿಂದ ಸೇನಾ ಸಲಕರಣೆಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಸಿಯಾಚಿನ್, ದ್ರಾಸ್, ಕಾರ್ಗಿಲ್  ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಭದ್ರತೆಗೆಗಾಗಿ ನಿಯೋಜಿಸಿರುವ ಯೋಧರಿಗೆ ಉಪಕರಣ ಖರೀದಿಸಲಾಗುತ್ತಿದೆ.
ಪ್ರತಿ ಆರು ತಿಂಗಳಿಗೊಮ್ಮೆ ವೆಚ್ಚವಾಗುತ್ತಿದ್ದ 2.5 ಕೋಟಿ ರೂ. ಹಣವನ್ನು ಉಳಿಸುವುದು ನಮ್ಮ ಗುರಿಯಾಗಿದೆ ಎಂದು  ಮತ್ತೋರ್ವ ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT