ಸಾಂದರ್ಭಿಕ ಚಿತ್ರ 
ದೇಶ

ಎತ್ತರದ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಸ್ವದೇಶಿ ನಿರ್ಮಿತ ಸಮವಸ್ತ್ರ: ಸೇನೆ

ಎತ್ತರದ ಪರ್ವತ ಪ್ರದೇಶಗಳಲ್ಲಿ ದೇಶ ಕಾಯುವ ಯೋಧರಿಗೆ ಚಳಿ, ಗಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ಉಡುಪು ಹಾಗೂ ಇನ್ನಿತರ ಸಲಕರಣೆಗಳನ್ನು ಭಾರತೀಯ ಸೇನೆ ಖರೀದಿಸುತ್ತಿದೆ.

ನವದೆಹಲಿ: ಎತ್ತರದ ಪರ್ವತ ಪ್ರದೇಶಗಳಲ್ಲಿ  ದೇಶ ಕಾಯುವ ಯೋಧರಿಗೆ ಚಳಿ, ಗಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ಉಡುಪು ಹಾಗೂ ಇನ್ನಿತರ ಸಲಕರಣೆಗಳನ್ನು ಭಾರತೀಯ ಸೇನೆ ಖರೀದಿಸುತ್ತಿದೆ.

ವಿವಿಧ ಕಡೆಗಳಲ್ಲಿನ ಎತ್ತರದ ಪ್ರದೇಶಗಳಲ್ಲಿ ಸುಮಾರು 40 ಸಾವಿರ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅವರ ಉಡುಪಿಗಾಗಿ ಪ್ರತಿ ಆರು ವರ್ಷಕ್ಕೊಮ್ಮೆ ತಗಲುತ್ತಿದ್ದ 2.5 ಕೋಟಿ ಆಮದು ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಸ್ಥಳೀಯ ತಯಾರಕರನ್ನು ಆಯ್ಕೆಮಾಡುವ ಪ್ರಸ್ತಾವನ್ನು ಸೇನೆ ಪ್ರಾರಂಭಿಸಿದೆ.

ಎತ್ತರದ ಪ್ರದೇಶಗಳಲ್ಲಿ 10 ಡಿ ಸೆಲ್ಸಿಯಸ್ ಗಿಂತಲೂ ಕಡಿಮೆ ಉಷ್ಠಾಂಶದಲ್ಲಿ ಸೈನಿಕರು ಸೇವೆ ಸಲ್ಲಿಸುತ್ತಾರೆ. ಅಂತಹ ವಾತಾವರಣಕ್ಕನುಗುಣವಾಗಿ ಹಗುರವಾದ ಬಟ್ಟೆಗಳ ಅಗತ್ಯವಿದೆ. ಪ್ರತಿ ಆರು ತಿಂಗಳಿಗೊಮ್ಮೆ ಸೇನೆಗಾಗಿ ಉಡುಪು ಹಾಗೂ ಮತ್ತಿತರ ಸಲಕರಣೆಗಳನ್ನು ಬದಲಾಯಿಸಲಾಗುತ್ತದೆ.

ಹವಾಮಾನ ಪರಿಸ್ಥಿತಿ ಹಾಗೂ ಸೈನಿಕರ ದೈಹಿಕ ಆರೋಗ್ಯ ರಕ್ಷಣೆಗಾಗಿ ಸೂಕ್ತ ಮಾರ್ಗದರ್ಶನ ರೂಪಿಸಲಾಗಿದೆ ಎಂದು ಹೇಳುವ ಸೇನಾ ಅಧಿಕಾರಿ, ಕ್ಯಾರಾಬಿನರ್ಸ್, ರಾಕ್ ಪಿಚೊನ್ಸ್, ಸಮ್ಮರ್ ಸೂಟ್, ಮತ್ತಿತರ ಉತ್ಪನ್ನಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಎಂಟು ಉತ್ಪನ್ನಗಳ ಪ್ರಾಯೋಗಿಕ ಪರೀಕ್ಷೆ ನಡೆಸಿ, ಎರಡನ್ನು ಸೇನೆಯ ಸಭೆಯಲ್ಲಿ ಗುರುತಿಸಲಾಗಿತ್ತು, ನಂತರ ಡಿಸೆಂಬರ್ 2018ರಲ್ಲಿ ಮತ್ತೊಂದು ಸಭೆ ನಡೆಸಿ,  ಬಿಡ್ ಕರೆದಿದ್ದು, ಹೊಸ ತಂತ್ರಜ್ಞಾನವನ್ನು ನೋಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸೇನೆ ಈಗ ಸ್ವಿಟ್ಜರ್‌ಲ್ಯಾಂಡ್ ನಿಂದ ವಿಶೇಷವಾದ  ಗೇರ್ ಸೇರಿದಂತೆ ನಾರ್ವೇ, ಪಿನ್ ಲ್ಯಾಂಡ್ ಮತ್ತಿತರ ರಾಷ್ಟ್ರಗಳಿಂದ ಸೇನಾ ಸಲಕರಣೆಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಸಿಯಾಚಿನ್, ದ್ರಾಸ್, ಕಾರ್ಗಿಲ್  ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಭದ್ರತೆಗೆಗಾಗಿ ನಿಯೋಜಿಸಿರುವ ಯೋಧರಿಗೆ ಉಪಕರಣ ಖರೀದಿಸಲಾಗುತ್ತಿದೆ.
ಪ್ರತಿ ಆರು ತಿಂಗಳಿಗೊಮ್ಮೆ ವೆಚ್ಚವಾಗುತ್ತಿದ್ದ 2.5 ಕೋಟಿ ರೂ. ಹಣವನ್ನು ಉಳಿಸುವುದು ನಮ್ಮ ಗುರಿಯಾಗಿದೆ ಎಂದು  ಮತ್ತೋರ್ವ ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT