ಸಂಗ್ರಹ ಚಿತ್ರ 
ದೇಶ

ಕೋಲ್ಕತಾದ ಎಲ್ಲ ಸಿಬಿಐ ಅಧಿಕಾರಿಗಳ ಮನೆಗೆ ಭದ್ರತೆಗೆ ಅರೆಸೇನಾ ಪಡೆ ನಿಯೋಜನೆ

ಕೋಲ್ಕತಾ ಪೊಲೀಸರಿಂದಲೇ ಜೀವಭಯದ ಕುರಿತು ಸಿಬಿಐ ಅಧಿಕಾರಿ ಪಂಕಜ್ ಕುಮಾರ್​ ಶ್ರೀವಾಸ್ತವ್ ಅವರು ಆತಂಕ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಎಲ್ಲ ಸಿಬಿಐ ಅಧಿಕಾರಿಗಳ ಮನೆ ಹಾಗೂ ಕಚೇರಿಗೆ ಕೇಂದ್ರ ಸರ್ಕಾರ ಅರೆಸೇನಾ ಪಡೆಯನ್ನು ಭದ್ರತೆಗೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

ಕೋಲ್ಕತಾ: ಕೋಲ್ಕತಾ ಪೊಲೀಸರಿಂದಲೇ ಜೀವಭಯದ ಕುರಿತು ಸಿಬಿಐ ಅಧಿಕಾರಿ ಪಂಕಜ್ ಕುಮಾರ್​ ಶ್ರೀವಾಸ್ತವ್ ಅವರು ಆತಂಕ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಎಲ್ಲ ಸಿಬಿಐ ಅಧಿಕಾರಿಗಳ ಮನೆ ಹಾಗೂ ಕಚೇರಿಗೆ ಕೇಂದ್ರ ಸರ್ಕಾರ ಅರೆಸೇನಾ ಪಡೆಯನ್ನು ಭದ್ರತೆಗೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.
ಕೋಲ್ಕತಾದ ಸಿಬಿಐ ಉನ್ನತ ಅಧಿಕಾರಿ ಪಂಕಜ್ ಕುಮಾರ್​ ಶ್ರೀವಾಸ್ತವ್ ಅವರು ಪೊಲೀಸರಿಂದಲೇ ತಮಗೆ ಜೀವ ಬೆದರಿಕೆ ಇದೆ ಎಂದು ಹೇಳಿಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರವು ಸಿಬಿಐ ಅಧಿಕಾರಿಗಳಿಗೆ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದೆ. ಕೋಲ್ಕತಾದ ಎಲ್ಲಾ ಸಿಬಿಐ ಕಚೇರಿಗಳು ಹಾಗೂ ಸಿಬಿಐ ಅಧಿಕಾರಿಗಳ ಮನೆಗಳಿಗೆ ಭದ್ರತೆ ಒದಗಿಸಲು ಭಾರೀ ಸಂಖ್ಯೆಯಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. 
ದಕ್ಷಿಣ ಕೋಲ್ಕತಾ ಮತ್ತು ಸಾಲ್ಟ್ ಲೇಕ್ ಬಳಿ ಇರುವ ಸಿಬಿಐ ಕಚೇರಿಗಳಂತೂ ಸಿಆರ್ ಪಿಎಫ್ ಯೋಧರು ಬಿಗಿಭದ್ರತೆ ಒದಗಿಸುತ್ತಿದ್ದಾರೆ. ಇಲ್ಲಿಗೆ ಬರುವವರನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಕಚೇರಿಗಳಷ್ಟೇ ಅಲ್ಲ, ಸಿಬಿಐ ಅಧಿಕಾರಿಗಳ ಮನೆಗಳಲ್ಲೂ ಕೇಂದ್ರ ಸರ್ಕಾರ ಬಿಗಿಭದ್ರತೆ ನಿಯೋಜಿಸಿದೆ.
ನಿನ್ನೆಯಷ್ಟೇ ಕೋಲ್ಕತಾದ ಸಿಬಿಐ ಜಂಟಿ ನಿರ್ದೇಶಕ ಪಂಕಜ್ ಶ್ರೀವಾಸ್ತವ್ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ನಿನ್ನೆ ಆತಂಕ ತೋಡಿಕೊಂಡಿದ್ದರು. ಕೋಲ್ಕತಾದ ಪೊಲೀಸ್ ಅಧಿಕಾರಿಗಳು ತಮ್ಮ ಮನೆಯನ್ನು ಸುತ್ತುವರಿದು ಬಾಗಿಲು ಬಡಿದರೆಂದು ಪಂಕಜ್ ಹೇಳಿಕೊಂಡಿದ್ದಾರೆ. 'ನನ್ನ ಕುಟುಂಬ ಭಯಭೀತಗೊಂಡಿದೆ. ನನ್ನ ಭದ್ರತೆ ಬಗ್ಗೆ ಭಯವಾಗುತ್ತಿದೆ. ಪೊಲೀಸರು ಯಾವ ಕ್ಷಣವಾದರೂ ಬಾಗಿಲು ಮುರಿದು ನನ್ನನ್ನು ಬಂಧಿಸಬಹುದು' ಎಂದು ಶ್ರೀವಾಸ್ತವ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ