ಯೋಧ ಔರಂಗಜೇಬ್ 
ದೇಶ

ಯೋಧ ಔರಂಗಜೇಬ್ ಹತ್ಯೆ; ಭಾರತೀಯ ಸೇನೆಯಿಂದ ಮೂವರು ಯೋಧರ ವಿಚಾರಣೆ

ಜಮ್ಮು-ಕಾಶ್ಮೀರದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಯೋಧನೊಬ್ಬನ ಹತ್ಯೆಗೆ ಸಂಬಂಧಪಟ್ಟಂತೆ ಭಾರತೀಯ ಸೇನೆ...

ಜಮ್ಮು-ಕಾಶ್ಮೀರದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಯೋಧನೊಬ್ಬನ ಹತ್ಯೆಗೆ ಸಂಬಂಧಪಟ್ಟಂತೆ ಭಾರತೀಯ ಸೇನೆ ಬುಧವಾರ ಮೂವರು ಯೋಧರನ್ನು ವಿಚಾರಣೆ ನಡೆಸಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಔರಂಗಾಜೇಬ್ ನನ್ನು ಅಪಹರಿಸಿ ಉಗ್ರರು ಕೊಂದಿದ್ದರು. ಈದ್ ಜಿಲ್ಲೆಯಲ್ಲಿ ತನ್ನ ಕುಟುಂಬದವರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲೆಂದು ಔರಂಗಜೇಬ್ ಪೂಂಚ್ ಜಿಲ್ಲೆಗೆ ಬರುತ್ತಿದ್ದ ವೇಳೆ ಅಪಹರಣವಾಗಿದೆ.

ಮೂವರು ಯೋಧರು ರಾಷ್ಟ್ರೀಯ ರೈಫಲ್ 44ಕ್ಕೆ ಸೇರಿದವರಾಗಿದ್ದು, ಔರಂಗಾಜೇಬ್ ನ ಬಗ್ಗೆ ಉಗ್ರರಿಗೆ ಮಾಹಿತಿ ನೀಡಿದ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದಾರೆ.

ಔರಂಗಾಜೇಬ್ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಗುಂಪಿನ ಸಮೀರ್ ಟೈಗರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಅಧಿಕಾರ ತಂಡದಲ್ಲಿ ಕೂಡ ಇದ್ದರು.

ಯೋಧನ ಸಾವಿನ ನಂತರ ಕುಟುಂಬ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಸರ್ಕಾರಕ್ಕೆ ರಾಜ್ಯದಲ್ಲಿ ಉಗ್ರಗಾಮಿಗಳನ್ನು ಹತ್ತಿಕ್ಕುವಂತೆ ಮನವಿ ಮಾಡಿತ್ತು.

ಕಳೆದ ಗಣರಾಜ್ಯೋತ್ಸವದಲ್ಲಿ ಯೋಧ ಔರಂಗಜೇಬ್ ಗೆ ಮರಣೋತ್ತರ ಶೌರ್ಯಚಕ್ರ ಪದಕ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT