ಬೆಂಗಳೂರಿನಲ್ಲಿ ವಾಯುಪಡೆ, ವಿಮಾನ ಅವಘಡ: ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ 
ದೇಶ

ಬೆಂಗಳೂರಿನಲ್ಲಿ ವಾಯುಪಡೆ ವಿಮಾನ ಅವಘಡ: ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ

ಇತ್ತೀಚೆಗೆ ಭಾರತೀಯ ವಾಯುಪಡೆ ವಿಮಾನವೊಂದು ಬೆಂಗಳೂರಿನ ಎಚ್.ಎ.ಎಲ್ ನಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಈಗ ಭವಿಷ್ಯ....

ನವದೆಹಲಿ: ಇತ್ತೀಚೆಗೆ ಭಾರತೀಯ ವಾಯುಪಡೆ ವಿಮಾನವೊಂದು ಬೆಂಗಳೂರಿನ ಎಚ್.ಎ.ಎಲ್ ನಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಈಗ ಭವಿಷ್ಯದಲ್ಲಿ ಅಂತಹಾ ಅವಘಡಗಳಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನವನ್ನು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಭಾರತೀಯ ವಾಯುಪಡೆಗೆ ಸೇರಿದ್ದ ಮಿರಾಜ್ -2000 ತರಬೇತಿನಿರತ ವಿಮಾನ ಫೆಬ್ರವರಿ 1 ರಂದು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದ ಬಳಿಕ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಮಿರಾಜ್  ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಭಾರತೀಯ ರಕ್ಷಣಾ ಸೇವೆಗಳ ಪರಿಣತರು ಹಾಗೂ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳನ್ನೊಳಗೊಂಡ ಮೇಲ್ವಿಚಾರಣಾ ಸಮಿತಿಯನ್ನು ಸ್ಥಾಪಿಸಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿದೆ.
ಅಲಾಕ್ ಅಲೋಕ್ ಶ್ರೀವಾಸ್ತವ  ಎಂಬ ವಕೀಲರು ಈ ಪಿಐಎಲ್ ಸಲ್ಲಿಸಿದ್ದಾರೆ.ಅಂತಹ ಘಟನೆಗಳಿಗೆ ಕಾರಣವಾಗುವ ಲೋಪಗಳನ್ನು ಗಮನಿಸದ ಸರ್ಕಾರಿ ಅಧಿಕಾರಿಗಳು ಮತ್ತು ಇತರರ  ವಿರುದ್ಧ ಸಮಿತಿ ಕ್ರ್ಮ ತೆಗೆದುಕೊಳ್ಳಬೇಕು.ಭವಿಷ್ಯದಲ್ಲಿ ಮತ್ತೆ ಇಂತಹಾ ಘಟನೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಸೂಚಿಸಬೇಕು ಎಂದು ಅವರು ಕೇಳಿದ್ದಾರೆ.
2015-16ರ ಸಾಲಿನ್ಬಲ್ಲಿ ಭಾರತೀಯ ವಾಯುಪಡೆಗೆ ಸೇರಿದ್ದ  35 ವಿಮಾನ ಮತ್ತು ಹೆಲಿಕಾಪ್ಟರ್ ಗಳು ಅಪಘಾತಕ್ಕೀಡಾಗಿದೆ.ಇದರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಇತ್ತೀಚಿನ ಮಾದ್ಯಮ ಅವರದಿಯನ್ನು ಆಧಾರವಾಗಿಟ್ಟು ವಿವರಿಸಿದ್ದಾರೆ. 2011 ರಿಂದಲೂ, ಭಾರತೀಯ ವಾಯುಪಡೆ, ಸೈನ್ಯ ಮತ್ತು ನೌಕಾಪಡೆಯು ಸುಮಾರು 75 ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ಅಪಘಾತಕ್ಕೀಡಾಗಿವೆ.ಇದರಲ್ಲಿ ಸುಮಾರು 80 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
"ಇತ್ತೀಚೆಗೆ ಭಾರತೀಯ ಸೇನಾಪಡೆಗಳಿಗೆ ಸೇರಿದ ವಿವಿಧ ವಿಮಾನಗಳ ಮತ್ತು ಹೆಲಿಕಾಪ್ಟರ್ಗಳ ಭೀಕರ ಅಪಘಾತಕ್ಕೀಡಾಗುತ್ತಿದೆ.ಈ ವೇಳೆ ಹಲವು ಯೋಧರ ಅಮೂಲ್ಯ ಜೀವ ಹೋಗಿದೆ."ಶ್ರೀವಾಸ್ತವ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT