ಫೆ. 12ಕ್ಕೆ ಸಂಸತ್ತಿನಲ್ಲಿ ವಾಜಪೇಯಿ ಭಾವಚಿತ್ರ ಅನಾವರಣ 
ದೇಶ

ಫೆ. 12ಕ್ಕೆ ಸಂಸತ್ತಿನಲ್ಲಿ ವಾಜಪೇಯಿ ಭಾವಚಿತ್ರ ಅನಾವರಣ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಸುಮಾರು ಆರು ತಿಂಗಳ ಬಳಿಕ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಅವರ ಭಾವಚಿತ್ರ ಅನಾವರಣಗೊಳ್ಳಲಿದೆ.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಸುಮಾರು ಆರು ತಿಂಗಳ ಬಳಿಕ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಅವರ ಭಾವಚಿತ್ರ ಅನಾವರಣಗೊಳ್ಳಲಿದೆ. ಇದೇ ಫೆಬ್ರವರಿ 12ರಂದು ವಾಜಪೇಯಿ ಅವರ ಭಾವಚಿತ್ರವನ್ನು ಸಂಸತ್ತಿನಲ್ಲಿ ಸ್ಥಾಪನೆ ಮಾಡಲಾಗುವುದು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಪ್ರಧಾನಿ ನರೇಂದ್ರ ಮೋದಿ, ಸಚಿವರು ಮತ್ತು ವಿವಿಧ ಪಕ್ಷಗಳ ನಾಯಕರ ಉಪಸ್ಥಿತಿಯಲ್ಲಿ ಭಾರತ ರತ್ನ ಅಟಲ್ ಅವರ ಭಾವಚಿತ್ರ  ಅನಾವರಣಗೊಳಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷದ ಹಿರಿಯ ಮುತ್ಸದ್ದಿ  ವಾಜಪೇಯಿ ಅವರು 1996 ರಲ್ಲಿ 13 ದಿನಗಳ ಕಾಲ ಸೇರಿದಂತೆ ಮೂರು ಬಾರಿ ಭಾರತದ ಪ್ರಧಾನಿಗಳಾಗಿದ್ದರು.1999ರಿಂದ 2004ರವರೆಗೆ ಅವರು ಐದು ವರ್ಷ ಕಾಲ ಅವರ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲಿತ್ತು.
1924 ರ ಡಿಸೆಂಬರ್ 25ರಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಜನಿಸಿದ್ದ ವಾಜಪೇಯಿ ಸುದೀರ್ಘವಾದ ಅನಾರೋಗ್ಯದ ನಂತರ ಆಗಸ್ಟ್ 16, 2018ರಂದು ನಿಧನರಾದರು.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಪಾರ್ಲಿಮೆಂಟ್ಸ್ ಪೋಟ್ರೇಟ್ ಸಮಿತಿಯ ಸಭೆಯಲ್ಲಿ ಡಿಸೆಂಬರ್ 18 ರಂದು ಭಾರತ ರತ್ನ ವಾಜಪೇಯಿ ಅವರ ಭಾವಚಿತ್ರವನ್ನು ಸಂಸತ್ತಿನಲ್ಲಿ ಸ್ಥಾಪಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಮಾಜಿ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸೇರಿ ಇನ್ನೂ ಹಲವು ನಾಯಕರ ಭಾವಚಿತ್ರಗಳನ್ನು ಇದಾಗಲೇ ನಾವು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಕಾಣಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?