ನಿತಿನ್ ಗಡ್ಕರಿ 
ದೇಶ

ಸಚಿವ ಗಡ್ಕರಿ ಕಾರ್ಯ ವೈಖರಿಗೆ ಮೇಜು ಕುಟ್ಟಿ ಸೋನಿಯಾ ಗಾಂಧಿ ಮೆಚ್ಚುಗೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಂತರ ಇದೀಗ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ....

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಂತರ ಇದೀಗ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದು, ದೇಶದ ಮೂಲಸೌಕರ್ಯ ಅಭಿವೃದ್ಧಿಗಾಗಿ ಹೆದ್ದಾರಿ ಸಚಿವರು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಗುರುವಾರ ಹೇಳಿದ್ದಾರೆ.
ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ ಗಡ್ಕರಿ ಅವರು ತಾವು ಕಾರ್ಯರೂಪಕ್ಕೆ ತಂದ ಯೋಜನೆಗಳ ಬಗ್ಗೆ ಮತ್ತು ದೇಶದಲ್ಲಿ ರಸ್ತೆ ಸಂಪರ್ಕ ವಿಸ್ತರಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಎಲ್ಲಾ ಸಂಸದರು ತಮ್ಮ ರಾಜಕೀಯ ಸಂಬಂಧಗಳನ್ನು ಬದಿಗಿಟ್ಟು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಮ್ಮ ಸಚಿವಾಲಯ ಮಾಡಿದ ಕೆಲಸಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಗಡ್ಕರಿ ಹೇಳಿದರು. ಈ ವೇಳೆ ಬಿಜೆಪಿ ಸದಸ್ಯರು ಮೇಜು ತಟ್ಟಿ ಗಡ್ಕರಿ ಅವರನ್ನು ಅಭಿನಂದಿಸಿದರು. 
ಸೋನಿಯಾ ಗಾಂಧಿ ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಸಹ ಮೇಜು ತಟ್ಟುವ ಮೂಲಕ ಗಡ್ಕರಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ ಅವರು, ಮೂಲ ಸೌಕರ್ಯ ಅಭಿವೃದ್ಧಿಗಾಗಿ ಗಡ್ಕರಿ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದರು.
ಇತ್ತೀಚಿಗಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮನೆಯವರ ಬಗ್ಗೆ ಕಾಳಜಿ ವಹಿಸದವರು ದೇಶ ನಿರ್ವಹಿಸಲಾರರು ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದರು.
ಬಿಜೆಪಿಯಲ್ಲಿ ಗಟ್ಸ್ ಇರೋ ಏಕೈಕ ನಾಯಕ ಎಂದರೆ ನಿತಿನ್ ಗಡ್ಕರಿ ಅವರಾಗಿದ್ದು, ಅವರು ರಾಫೆಲ್ ಡೀಲ್, ರೈತರ ಸಮಸ್ಯೆ ಮತ್ತು ಕೇಂದ್ರ ಸಂಸ್ಥೆಗಳ ನಾಶದ ಬಗ್ಗೆಯೂ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT