ದಿನಕರನ್ 
ದೇಶ

ದಿನಕರನ್ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಎಐಎಡಿಎಂಕೆ ಪಕ್ಷದ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಎಎಂಎಂಕೆ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ: ಎಐಎಡಿಎಂಕೆ ಪಕ್ಷದ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಎಎಂಎಂಕೆ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ ನೀಡಲು  ಸುಪ್ರೀಂಕೋರ್ಟ್ ನಿರಾಕರಿಸಿದೆ.

ಇದು ಸಾಮಾನ್ಯ ಚಿಹ್ನೆಯಾಗಿರುವುದರಿಂದ ಎಎಂಎಂಕೆ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ  ನೀಡುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿತ್ತು. ಅದೇ ರೀತಿಯಲ್ಲಿ  ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಂ. ಖನ್ವೀಲ್ ಕರ್ ಅವರನ್ನೊಳಗೊಂಡ ಪೀಠ ಈಗ  ತೀರ್ಪು ನೀಡಿದೆ.

ದಿನಕರನ್ ಅರ್ಜಿ ಅಸಾಮಾನ್ಯವಾದದ್ದು, ಅವರ  ಗುಂಪಿನ ನಾಯಕರೊಬ್ಬರು ಜೈಲಿನಲ್ಲಿದ್ದು, ಇದು ಎಎಂಎಂಕೆ ನಾಯಕರು ಆರ್ಹತೆ ಮೇಲೆ ದಾಳಿ ಮಾಡಿದೆ  ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಬಣ ಹೇಳಿದೆ.

ಕಳೆದ ವರ್ಷ ಡಿಎಂಕೆ ನಾಯಕ ಎಂ. ಕರುಣಾನಿಧಿ ನಿಧನದ ನಂತರ ನಡೆದ ತಿರುವರೂರು ಉಪ ಚುನಾವಣೆ ಸಂದರ್ಭದಲ್ಲಿ ಪ್ರೆಷರ್ ಕುಕ್ಕರ್ ಚಿಹ್ನೆ ವಿವಾದ ಏರ್ಪಟ್ಟಿತ್ತು. ಆದಾಗ್ಯೂ, ಚುನಾವಣಾ ಆಯೋಗ ಉಪ ಚುನಾವಣೆಯನ್ನು ರದ್ದುಪಡಿಸಿ ಜನವರಿ 28 ರಂದು ಉಪಚುನಾವಣೆ ನಡೆಸಲಾಗಿತ್ತು.

ದಿನಕರನ್  ಗುಂಪಿನ ಪಕ್ಷದ ಚಿಹ್ನೆಯಾಗಿ ಪ್ರೆಷರ್ ಕುಕ್ಕರ್ ನೀಡುವಂತೆ ದೆಹಲಿ ಹೈಕೋರ್ಟ್ ಮಾರ್ಚ್ 9 ರಂದು ಚುನಾವಣಾ ಆಯೋಗಕ್ಕೆ ನೀಡಿದ ಮಧ್ಯಂತರ ಆದೇಶವನ್ನು  ಕಳೆದ ವರ್ಷ ಮಾರ್ಚ್ 28 ರಂದು ಸುಪ್ರೀಂಕೋರ್ಟ್ ಅಮಾನತು ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT