ಮುಜಾಫರ್ ನಗರ ಗಲಭೆ ಪ್ರಕರಣ: 7 ಜನರಿಗೆ ಜೀವಾವಧಿ ಶಿಕ್ಷೆ 
ದೇಶ

ಮುಜಾಫರ್ ನಗರ ಗಲಭೆ ಪ್ರಕರಣ: 7 ಜನರಿಗೆ ಜೀವಾವಧಿ ಶಿಕ್ಷೆ

2013 ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣದ 7 ಆರೋಪಿಗಳು ದೋಷಿಗಳೆಂದು ಸಾಬೀತಾಗಿದ್ದು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮುಜಾಫರ್ ನಗರ: 2013 ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣದ 7 ಆರೋಪಿಗಳು ದೋಷಿಗಳೆಂದು ಸಾಬೀತಾಗಿದ್ದು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 
ಮುಜಾಫರ್ ನಗರದಲ್ಲಿ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ್ದರ ನಂತರದಲ್ಲಿ ಉಂಟಾಗಿದ್ದ ಗಲಭೆ ಪ್ರಕರಣದಲ್ಲಿ 7 ಜನರನ್ನೂ ಕೋರ್ಟ್ ಅಪರಾಧಿಗಳೆಂದು ತೀರ್ಪು ಪ್ರಕಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದ 5 ಅಪರಾಧಿಗಳು ಜೈಲಿನಲ್ಲೇ ಇದ್ದರೆ ಕಳೆದ ವರ್ಷ ಅಲ್ಲಹಾಬಾದ್ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು. 
ಶಹನವಾಜ್, ಇಬ್ಬರು ಸಹೋದರರಾದ ಗೌರವ್ ಹಾಗೂ ಸಚಿನ್ 2013 ರ ಆಗಸ್ಟ್ 27 ರಂದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾಗಿದ್ದರು. ಈ ಬಳಿಕ ಮುಜಾಫರ್ ನಗರದಲ್ಲಿ ಗಲಭೆ ಉಂಟಾಗಿತ್ತು. ಗಲಭೆಯಲ್ಲಿ 62 ಜನರು ಮೃತಪಟ್ಟಿದ್ದರು. 50,000 ಕ್ಕೂ ಹೆಚ್ಚು ಜನರು ವಲಸೆ ಹೋಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT