ಮುಜಾಫರ್ ನಗರ ಗಲಭೆ ಪ್ರಕರಣ: 7 ಜನರಿಗೆ ಜೀವಾವಧಿ ಶಿಕ್ಷೆ 
ದೇಶ

ಮುಜಾಫರ್ ನಗರ ಗಲಭೆ ಪ್ರಕರಣ: 7 ಜನರಿಗೆ ಜೀವಾವಧಿ ಶಿಕ್ಷೆ

2013 ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣದ 7 ಆರೋಪಿಗಳು ದೋಷಿಗಳೆಂದು ಸಾಬೀತಾಗಿದ್ದು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮುಜಾಫರ್ ನಗರ: 2013 ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣದ 7 ಆರೋಪಿಗಳು ದೋಷಿಗಳೆಂದು ಸಾಬೀತಾಗಿದ್ದು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 
ಮುಜಾಫರ್ ನಗರದಲ್ಲಿ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ್ದರ ನಂತರದಲ್ಲಿ ಉಂಟಾಗಿದ್ದ ಗಲಭೆ ಪ್ರಕರಣದಲ್ಲಿ 7 ಜನರನ್ನೂ ಕೋರ್ಟ್ ಅಪರಾಧಿಗಳೆಂದು ತೀರ್ಪು ಪ್ರಕಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದ 5 ಅಪರಾಧಿಗಳು ಜೈಲಿನಲ್ಲೇ ಇದ್ದರೆ ಕಳೆದ ವರ್ಷ ಅಲ್ಲಹಾಬಾದ್ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು. 
ಶಹನವಾಜ್, ಇಬ್ಬರು ಸಹೋದರರಾದ ಗೌರವ್ ಹಾಗೂ ಸಚಿನ್ 2013 ರ ಆಗಸ್ಟ್ 27 ರಂದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾಗಿದ್ದರು. ಈ ಬಳಿಕ ಮುಜಾಫರ್ ನಗರದಲ್ಲಿ ಗಲಭೆ ಉಂಟಾಗಿತ್ತು. ಗಲಭೆಯಲ್ಲಿ 62 ಜನರು ಮೃತಪಟ್ಟಿದ್ದರು. 50,000 ಕ್ಕೂ ಹೆಚ್ಚು ಜನರು ವಲಸೆ ಹೋಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT